ಸುಬ್ರಹ್ಮಣ್ಯ: “ಕ್ರೀಡೆಯು ಕ್ರೀಡಾಳುಗಳ ಬದುಕಿಗೆ ಹೊಸ ಆಯಾಮ ನೀಡುತ್ತದೆ. ಕ್ರೀಡಾ ಮನೋಭಾವನೆಯು ಆಟಗಾರರ ಪ್ರಗತಿಗೆ ಅಸ್ತ್ರ. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಗುರಿಯತ್ತ ಸಾಗುವ ಗುಣ ಆಟಗಾರರಲ್ಲಿ ಬೆಳೆಸಿಕೊಳ್ಳಬೇಕು. ಕಷ್ಟ ಪರಿಶ್ರಮದ ಅಭ್ಯಾಸವೇ ಕ್ರೀಡಾಸಾಧನೆಗೆ ಮೂಲ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಸೋಮವಾರ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ದ.ಕ ಜಿಲ್ಲಾ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ಶಾಸಕಿ ಅವರು ಮುಂದುವರಿದು, “ವ್ಯಾಸಂಗದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡುವಂತೆ ಶಾಲಾ-ಕಾಲೇಜು ಮಟ್ಟದಲ್ಲಿ ನಡೆಯುವ ಸ್ಪರ್ಧೆಗಳು ಪೂರಕವಾಗುತ್ತವೆ. ಕ್ರೀಡೆ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಸಂತಸವನ್ನು ನೀಡುತ್ತದೆ. ಮಕ್ಕಳು ಕ್ರೀಡೆಗಳತ್ತ ಆಕರ್ಷಿತರಾಗುವಂತೆ ಮಾರ್ಗದರ್ಶನ ನೀಡುವುದು ಅಗತ್ಯ” ಎಂದರು.
ಮುಖ್ಯ ಅತಿಥಿಗಳು
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ಕಲ್ಲಾಜೆ, ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ ಶೆಟ್ಟಿ, ರಾಜ್ಯ ಮಟ್ಟದ ಕಬಡ್ಡಿ ತೀರ್ಪುಗಾರ ಶಿವರಾಮ ಯೇನೆಕಲ್ಲು, ಕೆ.ಎಸ್. ಗೌಡ ವಿದ್ಯಾಲಯದ ಪ್ರಾಚಾರ್ಯ ಸದಾನಂದ ಮಾವಾಜಿ, ಮುಲ್ಕಿ ಮೆಡ್ಲಿನ್ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಲೀರಿಯಾ ಶಾಂತಿ ಮೆಂಡೋಲ್ಸಾ ಮುಖ್ಯ ಅತಿಥಿಗಳಾಗಿದ್ದರು.
ವೇದಿಕೆಯಲ್ಲಿದ್ದವರು
ಎಸ್.ಎಸ್.ಪಿ.ಯು. ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ, ಸಾಂಸ್ಕೃತಿಕ ತಂಡದ ಸಂಚಾಲಕಿ ರೇಖಾರಾಣಿ ಸೋಮಶೇಖರ್, ವಿದ್ಯಾರ್ಥಿ ಸರಕಾರದ ಸಂಯೋಜಕ ಜಯಪ್ರಕಾಶ್ ಆರ್, ಕ್ರೀಡಾ ಕಾರ್ಯದರ್ಶಿ ಧನುಷ್ ಕಾಶಿಕಟ್ಟೆ ಉಪಸ್ಥಿತರಿದ್ದರು.
ಭಾಗವಹಿಸಿದ ತಂಡಗಳು
ದ.ಕ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬಂದ 18 ಬಾಲಕ-ಬಾಲಕಿಯರ ತಂಡಗಳು ಪಂದ್ಯಾಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದವು.
ನಿರ್ವಹಣೆ
ಉಪನ್ಯಾಸಕಿ ಶ್ರುತಿ ಅಶ್ವಥ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ವಿದ್ಯಾರ್ಥಿಗಳು ಕ್ರೀಡಾಂಗಣ ಮತ್ತು ಅಂಗಣಗಳನ್ನು ಅಚ್ಚುಕಟ್ಟಾಗಿ ಸಜ್ಜುಗೊಳಿಸಿದ್ದರು.
Post a Comment