Posts

ರಾಮಕುಂಜ: ಆದಿತ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥ, ನಿವೃತ್ತ ಶಿಕ್ಷಕ ಇ. ರಮೇಶ ಉಪಾಧ್ಯಾಯ ನಿಧನ.

Image
ರಾಮಕುಂಜ : ಆದಿತ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರು, ಹಿರಿಯ ಸಮಾಜಸೇವಕರು ಹಾಗೂ ನಿವೃತ್ತ ಶಿಕ್ಷಕರಾದ ರಾಮಕುಂಜ ಗ್ರಾಮದ ಕಲ್ಲೇರಿ ನಿವಾಸಿ ಇ. ರಮೇಶ ಉಪಾಧ್ಯಾಯ (96) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಜುಲೈ 2ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಇ. ರಮೇಶ ಉಪಾಧ್ಯಾಯ ಅವರು ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ರಾಮಕುಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 35 ವರ್ಷಗಳಿಗೂ ಹೆಚ್ಚು ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತು ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ಕೃಷಿ ಚಟುವಟಿಕೆಗಳ ಜೊತೆಗೆ ಮಕ್ಕಳ ಸಹಕಾರದಲ್ಲಿ ವಿವಿಧ ಉದ್ಯಮಗಳನ್ನು ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಉಪ್ಪಿನಂಗಡಿಯಲ್ಲಿ ಹೋಟೆಲ್ ಆದಿತ್ಯ, ಸುಬ್ರಹ್ಮಣ್ಯದಲ್ಲಿ ಆದಿತ್ಯ ನೆಸ್ಟ್, ಧರ್ಮಸ್ಥಳ-ನಿಡ್ಲೆ ಭಾಗದಲ್ಲಿ ಆದಿತ್ಯ ವ್ಯೂ ಸೇರಿದಂತೆ ಹಲವು ಉದ್ದಿಮೆಗಳನ್ನು ಬೆಳೆಸಿದ ಅವರು, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ವಿವಿಧ ಸಾಮಗ್ರಿಗಳ ಪೂರೈಕೆಯಲ್ಲಿಯೂ ಹೆಸರು ಗಳಿಸಿದ್ದರು. ಸಮಾಜಮುಖಿ ಚಿಂತನೆಯ ವ್...

*ಸದ್ದಿಲ್ಲದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು; ಮಾಧ್ಯಮಗಳ ನಿರೀಕ್ಷೆಗೆ ನಿರಾಸೆ – ಅಭಿವೃದ್ಧಿ ಬಗ್ಗೆ ಸ್ಪಷ್ಟನೆ ನೀಡುವಂತೆ ಒತ್ತಾಯ*

Image
ಕುಕ್ಕೆ ಸುಬ್ರಹ್ಮಣ್ಯ ;ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾದ ಶರತ್ ಐಎಎಸ್ ಅವರು ಜೂನ್ 28ರ ರಾತ್ರಿ ಸದ್ದಿಲ್ಲದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ಆದಿಶೇಷ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ ಬಳಿಕ ಜೂನ್ 29ರ ಬೆಳಿಗ್ಗೆ ಸುಮಾರು 7 ಗಂಟೆಗೆ ಶ್ರೀ ದೇವರ ದರ್ಶನ ಪಡೆದು ಯಾವುದೇ ಮಾಧ್ಯಮದವರೊಂದಿಗೆ ಮಾತನಾಡದೆ ಹಾಗೂ ಪತ್ರಿಕಾ ಹೇಳಿಕೆ ನೀಡದೆ ತೆರಳಿರುವ ಮಾಹಿತಿ ಲಭ್ಯವಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಕುರಿತು ಆಯುಕ್ತರು ಮಹತ್ವದ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಈ ನಡೆ ನಿರಾಸೆ ಉಂಟುಮಾಡಿದೆ. ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರಿಗೆ ಇನ್ನಷ್ಟು ಉತ್ತಮ ಮೂಲಭೂತ ಸೌಲಭ್ಯಗಳು ಕಲ್ಪಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ವಿಶೇಷವಾಗಿ ಭಕ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಶೌಚಾಲಯಗಳ ನಿರ್ಮಾಣ, ರಥಬೀದಿಯ ಶೆಡ್‌ನಲ್ಲಿ ರಾತ್ರಿ ತಂಗುವ ಭಕ್ತರಿಗೆ ಸೂಕ್ತ ವಸತಿ ವ್ಯವಸ್ಥೆ, ಮಳೆಗಾಲದಲ್ಲಿ ರಸ್ತೆಯ ಮೇಲೆ ಹರಿಯುವ ನೀರನ್ನು ತಡೆಯಲು ಸಮರ್ಪಕ ಚರಂಡಿ ವ್ಯವಸ್ಥೆ, ಗುಣಮಟ್ಟದ ಮತ್ತು ವಿಶಾಲ ವಾಹನ ನಿಲುಗಡೆ ವ್ಯವಸ್ಥೆ, ಹೆಚ್ಚಿನ ಭದ್ರತಾ ಸಿಬ್ಬಂದಿ ನೇಮಕ ಹಾಗೂ ಭಕ್ತರಿಗೆ ಪೂಜೆ ಮತ್ತು ಸೇವೆಗಳ ಕುರಿತು ಮಾಹಿತಿ ನೀಡುವ ಸಹಾಯ ಕೇಂ...

ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನಡೆಯಿತು.

Image
ಸುಬ್ರಹ್ಮಣ್ಯ , ಜೂನ್ 28: ಶ್ರೀ ಸುಬ್ರಹ್ಮಣ್ಯೇಶ್ವರ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ಶನಿವಾರ (ಜೂನ್ 27) ಕಾಲೇಜಿನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಂದಾ ಹರೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಚ್ಚ ನ್ಯಾಯಾಲಯದ ಹಿರಿಯ ವಕೀಲರು ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಶ್ರೀ ಪ್ರವೀಣ್ ಕುಮಾರ್ ಕೆ. ಎನ್. ಭಾಗವಹಿಸಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳನ್ನು ಉದ್ಘಾಟಿಸಿದರು. ಅತಿಥಿಯಾಗಿ ಶ್ರೀ ಚಾಕೋ ಫಿಲಿಪ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಪ್ರವೀಣ್ ಕುಮಾರ್ ಕೆ. ಎನ್. ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನಾಯಕತ್ವ, ಶಿಸ್ತು, ಜವಾಬ್ದಾರಿ ಹಾಗೂ ಸಾಮಾಜಿಕ ಸೇವೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇಂತಹ ಸಂಘಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಉತ್ತಮ ನಾಯಕತ್ವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು. ಗೌರವ ಅತಿಥಿಗಳಾಗಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶ್ರೀ ವಿಶ್ವನಾಥ್, ಉಪಾಧ್ಯಕ್ಷೆ ಶ್ರೀಮತಿ ಅಶ್ವಿನಿ, ಸದಸ್ಯೆ ಶ್ರೀಮತಿ ತೀರ್ಥಕುಮಾರಿ, ಮಾಜಿ ಅಧ್ಯಕ್ಷ ಶ್ರೀ ರಾಮಕೃಷ್ಣ ಹೊಳ್ಳಾರು ಹಾಗೂ ಜ್ಞಾನದೀಪ ವಿದ್ಯಾರ್ಥಿ ಸಂಘದ ಸಂಘಟಕ ಶ್ರೀ ಮುರಳಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ...

ಎಸ್‌ಎಸ್‌ಪಿಯುನಲ್ಲಿ 1008 ವಿದ್ಯಾರ್ಥಿಗಳ ಸಾಮೂಹಿಕ ಯೋಗಾಸನ: "ಯೋಗೇನ ಚಿತ್ತಸ್ಯ" ಮೊಳಗಿದ ವಿಶ್ವ ಯೋಗ ದಿನಾಚರಣೆ

Image
ಎಸ್‌ಎಸ್‌ಪಿಯುನಲ್ಲಿ ಏಕಕಾಲದಲ್ಲಿ 1008 ವಿದ್ಯಾರ್ಥಿಗಳಿಂದ ಯೋಗಾಸನ "ಯೋಗೇನ ಚಿತ್ತಸ್ಯ..." ಮೊಳಗಿದ ವಿಶ್ವ ಯೋಗ ದಿನಾಚರಣೆ ಚಿತ್ತ ಚಾಂಚಲ್ಯ ನಿವಾರಣೆಗೆ ಯೋಗವೇ ಅಡಿಗಲ್ಲು: ಪ್ರಾಚಾರ್ಯ ಸೋಮಶೇಖರ ನಾಯಕ್ ಸುಬ್ರಹ್ಮಣ್ಯ, ಜೂನ್ 22: ಚಿತ್ತದ ಚಂಚಲತೆಯನ್ನು ದೂರ ಮಾಡಿ ಏಕಾಗ್ರತೆ, ದೈಹಿಕ ಆರೋಗ್ಯ ಮತ್ತು ಮಾನಸಿಕ ಸದೃಢತೆಯನ್ನು ಬೆಳೆಸುವಲ್ಲಿ ಯೋಗ ಮಹತ್ವದ ಪಾತ್ರ ವಹಿಸುತ್ತದೆ. ಪ್ರಾಚೀನ ಋಷಿಮುನಿಗಳಿಂದ ಸಂಜಾತವಾದ ಯೋಗವು ಸರ್ವರೋಗ ನಿವಾರಕವಾಗಿದ್ದು, ವಿಶ್ವಕ್ಕೆ ಭಾರತ ನೀಡಿರುವ ಅಮೂಲ್ಯ ಕೊಡುಗೆಯಾಗಿದೆ ಎಂದು ಎಸ್‌ಎಸ್‌ಪಿಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ಅಭಿಪ್ರಾಯಪಟ್ಟರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸೋಮವಾರ ಆಯೋಜಿಸಿದ್ದ ಸಾಮೂಹಿಕ ಯೋಗಾಸನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಯೋಗವು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಶಿಸ್ತು ಬೆಳೆಸುತ್ತದೆ. "ಯೋಗದಿಂದ ರೋಗವಿಲ್ಲ" ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. 1008 ವಿದ್ಯಾರ್ಥಿಗಳ ಸಾಮೂಹಿಕ ಯೋಗಾಸನ ಕಾಲೇಜಿನ ಮೇಲ್ಬಾಗ ಹಾಗೂ ಕೆಳಭಾಗದ ಕ್ರೀಡಾಂಗಣದಲ್ಲ...

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಹಿನ್ನೆಲೆ ಕುಕ್ಕೆ ಶ್ರೀ ದೇವರಲ್ಲಿ ವಿಶೇಷ ಪೂಜೆ.

Image
ಸುಬ್ರಹ್ಮಣ್ಯ , ಜೂನ್ 3: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರ ಯಶಸ್ವಿ ಆಡಳಿತ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು. ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಹಿರಿಯ ಕಾರ್ಯಕರ್ತರು ಶ್ರೀ ದೇವರ ಸನ್ನಿಧಿಯಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥನೆ ಸಲ್ಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಯುರಾರೋಗ್ಯ, ಯಶಸ್ಸು ಮತ್ತು ಜನಪರ ಆಡಳಿತ ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬೇಡಿಕೊಂಡರು. ಇದೇ ಸಂದರ್ಭದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., “ಕರ್ನಾಟಕದ ಜನತೆ ಅಪಾರ ನಿರೀಕ್ಷೆಯೊಂದಿಗೆ ಹೊಸ ನಾಯಕತ್ವವನ್ನು ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಿ ಜನಪರ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಯುವಜನರ ಆಶೋತ್ತರಗಳಿಗೆ ಸ್ಪಂದಿಸುವ ಆಡಳಿತವನ್ನು ಅವರು ನೀಡುವರು. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಅಭಿವೃದ್ಧಿಯ ವಾತಾವರಣ ನಿರ್ಮಾಣವಾಗಲಿ ಎಂಬ ಆಶ...

ಕುಕ್ಕೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 24×7 ಸೇವೆ ಜಾರಿಗೆ ಒತ್ತಾಯ: ವಾರದ ಗಡುವು, ಇಲ್ಲದಿದ್ದರೆ ಧರಣಿ ಎಚ್ಚರಿಕೆ.

Image
ಕುಕ್ಕೆ ಸುಬ್ರಹ್ಮಣ್ಯ , ಮೇ 30: ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 24×7 ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುವಂತೆ ಮಾಡಲು ಅಗತ್ಯ ಕಟ್ಟಡ, ವೈದ್ಯಕೀಯ ಸಲಕರಣೆಗಳು ಹಾಗೂ ಮೂಲಸೌಕರ್ಯಗಳು ಈಗಾಗಲೇ ಲಭ್ಯವಿದ್ದರೂ, ಪೂರ್ಣ ಪ್ರಮಾಣದ 24 ಗಂಟೆಗಳ ಆರೋಗ್ಯ ಸೇವೆ ಆರಂಭಿಸುವ ಕುರಿತು ಅಧಿಕಾರಿಗಳು ಯಾವುದೇ ಸ್ಪಷ್ಟ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಂಬಂಧಿಸಿದ ಸಚಿವರು ಹಾಗೂ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಹಲವು ಬಾರಿ ಪತ್ರದ ಮೂಲಕ ಮನವಿ ಸಲ್ಲಿಸಲಾಗಿದ್ದರೂ, ಇದುವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 30ರಿಂದ ಒಂದು ವಾರದ ಗಡುವು ನೀಡಲಾಗಿದ್ದು, ಈ ಅವಧಿಯೊಳಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ) ಅವರು ಸ್ವತಃ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, 24×7 ಆಸ್ಪತ್ರೆ ಸೇವೆ ಜಾರಿಗೆ ಸಂಬಂಧಿಸಿದಂತೆ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಆಗ್ರಹಿಸಲಾಗಿದೆ. ರಾತ್ರಿ ಸಮಯದಲ್ಲಿ ತುರ್ತು ಆರೋಗ್ಯ ಸೇವೆಗಳ ಕೊರತೆಯಿಂದ ಗ್ರಾಮಸ್ಥರು ಹಾಗೂ ಭಕ್ತಾದಿಗಳು ತೊಂದರೆ ಅನುಭವಿಸುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದಂತಹ ಧಾರ್ಮಿಕ ಕ್ಷೇತ್ರದಲ್ಲಿ ದಿನದ 24 ಗಂಟೆಗಳ ಆರೋಗ್ಯ ಸೇವೆ ಅತ್ಯಗತ್ಯವಾಗಿದೆ ಎಂದು ಮನವಿ ಪ...

*ಶಿಕ್ಷಕನೊಳಗಿದ್ದ ಸೈನಿಕ* *ಶ್ರೀ ವಿಷ್ಣುಪ್ರಸಾದ್. ಸಿ* *ವಿಶ್ರಾಂತ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ, ಪುತ್ತೂರು*

Image
ಹೌದು, ಸರಕಾರಿ ಸೇವೆ ದೇವರ ಸೇವೆ. ಸುಮಾರು ಮೂವತ್ತೈದು ವರ್ಷಗಳ ನಿರಂತರ ಸೇವೆ. ಅದರಲ್ಲೂ ತಾಲೂಕು, ಜಿಲ್ಲಾ ವ್ಯಾಪ್ತಿಯ ಅಧಿಕಾರಿಯಾಗಿ ಕಪ್ಪು ಚುಕ್ಕೆ ಇಲ್ಲದೆ ನಿವೃತ್ತಿ ಹೊಂದುವುದು ಇಂದಿನ ದಿನಗಳಲ್ಲಿ ಸುಲಭದ ಮಾತಲ್ಲ. ಜನರು, ಜನರಿಗಾಗಿ, ಜನರಿಂದ ನಡೆಯುವ ಸರ್ಕಾರಿ ವ್ಯವಸ್ಥೆಯಲ್ಲಿ ದಡ ಸೇರುವುದು ದೊಡ್ಡ ಸಾಧನೆಯೇ ಸರಿ.   ಅರ್ಥ ಮಾಡಿಕೊಳ್ಳುವ ಮನಸ್ಸು, ಕ್ಷಮಿಸುವ ಗುಣ, ಕೈಜೋಡಿಸುವ ಸ್ನೇಹ, ಸಮಾಧಾನ ಮಾಡುವ ಹೃದಯ, ಹದವರಿತ ತಾಳ್ಮೆಯ ಮಾತು, ಪ್ರಾಮಾಣಿಕ ದುಡಿಮೆ – ಇವುಗಳೇ ಜೀವನದ ನಿಜವಾದ ಆಸ್ತಿ. ಅದನ್ನೇ ವೃತ್ತಿ ಕೌಶಲ್ಯ ಎನ್ನುತ್ತಾರೆ. ಪದವಿ ಪಡೆದ ಮಾತ್ರಕ್ಕೆ ಇವೆಲ್ಲ ಕೈಗೆಟುಕದು. ಅಂಕ ಗಳಿಸಿದ ಮಾತ್ರಕ್ಕೆ ಸಿದ್ಧಿ, ಸಾಧನೆಯಾಗದು.   *ಬಹುಮುಖ ಪಾತ್ರಧಾರಿ*   ಪುತ್ತೂರು ತಾಲೂಕು ಶಾಲಾ ಶಿಕ್ಷಣ ಇಲಾಖೆಯಲ್ಲಿ ಬಹುಮುಖ ಪಾತ್ರಧಾರಿಯಾಗಿ ಹಲವು ವರ್ಷಗಳಿಂದ ನಮ್ಮೊಂದಿಗೆ ನಮ್ಮವರಾಗಿದ್ದರು. 2026ರ ಮೇ ತಿಂಗಳ 30ನೇ ತಾರೀಕು ಹಸಿರು ಶಾಯಿಯ ಲೇಖನಿಗೆ ವಿಶ್ರಾಂತಿ ನೀಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮೆಟ್ಟಿಲು ಇಳಿದು ಹೋದವರು ಶ್ರೀ ವಿಷ್ಣುಪ್ರಸಾದ್. ಸಿ. ಮನದಲ್ಲಿ ವಿಶಾಲತೆ, ಸೇವೆಯಲ್ಲಿ ನಮ್ರತೆ, ಸ್ನೇಹದಲ್ಲಿ ಪರಿಶುದ್ಧತೆ, ವ್ಯವಹಾರದಲ್ಲಿ ಸಭ್ಯತೆ, ಮುಖದಲ್ಲಿ ಪ್ರಸನ್ನತೆ, ಪರಿವಾರದಲ್ಲಿ ಏಕತೆ, ಮಾತಿನಲ್ಲಿ ಮಧುರತೆ, ಸಂಬಂಧದಲ್ಲಿ ನಿರ್ಲಿಪ್ತತೆ, ಸಂಸ್ಕಾರದಲ್ಲಿ ಶುದ್...