ನೀರಕಟ್ಟೆ ಎಂಬಲ್ಲಿ ಬುಲೆಟ್ ಟ್ಯಾಂಕರ್ ಅಪಘಾತ.
ಉಪ್ಪಿನಂಗಡಿ; ಅಕ್ಟೋಬರ್, 29, ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಎಂಬಲ್ಲಿ ಸುಮಾರು 9.30 ಗಂಟೆಗೆ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಲಿ ಬುಲೆಟ್ ಟ್ಯಾಂಕರ್ ,ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನೀರಕಟ್ಟೆ ಎಂಬಲ್ಲಿ ಮಗುಚಿ ಬಿದ್ದು ಅಪಘಾತ ಸಂಭವಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
ರಾಷ್ಟ್ರೀಯ ಹೆದ್ದಾರಿ ಆದ್ದರಿಂದ ವಾಹನಗಳ ಸಂಖ್ಯೆ ಹೆಚ್ಚಿರುವ ಕಾರಣ, ಉಳಿದ ವಾಹನಗಳಿಗೆ ಸಂಚಾರಕ್ಕೆ ಅಡಚಣೆ ಆಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ,11ಗಂಟೆ ಸುಮಾರಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದ ಉಪ್ಪಿನಂಗಡಿ ಪೊಲೀಸ್ ಸಿಬ್ಬಂದಿ ಸತೀಶ್ ಹಾಗೂ ರಾಮಣ್ಣ.
Comments
Post a Comment