ಕಡಬ: ಚಲಿಸುತ್ತಿದ್ದ ಬೈಕ್ ಮೇಲೆ ದೂಪದ (ಹಾಲು ಮಡ್ಡಿ) ಮರ ಬಿದ್ದು ಬೈಕ್ ಸವಾರ ಗಾಯಗೊಂಡ ಘಟನೆ.

ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ  ಮಂಗಳವಾರ ಸಂಜೆ( ಫೆ.4) ನಡೆದಿದೆ.
ಈ ಘಟನೆಯಲ್ಲಿ ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ ಯಶವಂತ ಎಂಬವರು ಗಂಭೀರ ಗಾಯಗೊಂಡಿರುವುದಾಗಿ  ತಿಳಿದು ಬಂದಿದೆ . ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ.  ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಅವರು ಈ ರಸ್ತೆಯಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ
ಕಳೆದ ಕೆಲವು ತಿಂಗಳ ಹಿಂದಷ್ಟೇ ಇದೇ ಪರಿಸರದಲ್ಲಿ ದೂಪದ ಮರವೊಂದು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.  



ಈ ವೇಳೆ ರಸ್ತೆಯ ಅಂಚಿನಲ್ಲಿರುವ ಮರಗಳನ್ನು ತೆಗೆಯುವಂತೆ ಸ್ಥಳೀಯರು ಆಗ್ರಹಿಸಿದ್ದು, ಆದರೇ ಆ ವೇಳೆ ಕೇವಲ ಎರಡು ಮರಗಳನ್ನು ತೆರವುಗೊಳಿಸಿ ಜನರ ಕಣ್ಣಿಗೆ ಮಣ್ಣೇರಚ್ಚುವ ಕಾರ್ಯ ಅರಣ್ಯ ಇಲಾಖೆ ಮಾಡಿತ್ತು ಎಂಬ ಆರೋಪ ಆಗ ಕೇಳಿ ಬಂದಿತ್ತು. ಈ ಆರೋಪಕ್ಕೆ ಪುಷ್ಟಿ ನೀಡುವಂತೆ ಇಂದಿನ ಘಟನೆ ನಡೆದಿದೆ.

ಇಂದಿನ ಘಟನೆಯಲ್ಲಿ ಕಡಬ ತಾಲೂಕಿನ  ಕೋಡಿಂಬಾಳ ಗ್ರಾಮದ ಪಟ್ನ ನಿವಾಸಿ,ಪಿಗ್ಮಿ ಕಲೆಕ್ಟರ್‌ ಆಗಿ ಕೆಲಸ ನಿರ್ವಹಿಸುವ ಯಶವಂತ ಎಂಬವರು ಗಾಯಗೊಂಡಿದ್ದಾರೆ. ಎಂದಿನಂತೆ ಪಿಗ್ಮಿ ಕಲೆಕ್ಷನ್‌ ಗೆಂದು ಅವರು ತಮ್ಮ ದ್ವಿ ಚಕ್ರ ವಾಹನದಲ್ಲಿ ಸಂಜೆ ವೇಳೆ  ಸಂಚರಿಸುತ್ತಿದ್ದಾಗ ಅಪಘಾತ ನಡೆದಿದೆ.  ಅವರು  ಕಡಬ – ಪಂಜ ರಸ್ತೆಯ ಪುಳಿಕುಕ್ಕು ಸಮೀಪ   ನಡೆದಿದೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!