Posts

Showing posts from March, 2025

ಆದಿ ಸುಬ್ರಹ್ಮಣ್ಯ: ಕಾಳಿಂಗ ಸರ್ಪ ಜೀವ ಉಳಿಸಿದ ಉರಗ ಪ್ರೇಮಿ ಮಾಧವ.

Image
ಆದಿ ಸುಬ್ರಹ್ಮಣ್ಯ , 31 ಮಾರ್ಚ್ 2025:  ಮಾರ್ಚ್ ತಿಂಗಳು ಎಂದರೆ ಕಾಳಿಂಗ ಸರ್ಪಗಳ ವಂಶಾಭಿವೃದ್ಧಿ ಸಮಯವಾಗಿದ್ದು, ಇವು ತಮ್ಮ ಹೊಸ ಜನನಕ್ಕಾಗಿ ಅತಿಯಾದ ಚಟುವಟಿಕೆಯಲ್ಲಿ ಬ್ಯುಸಿಯಾಗಿರುತ್ತವೆ. ಈ ಸಮಯದಲ್ಲಿ, ನೈಸರ್ಗಿಕ ಪ್ರಪಂಚದಲ್ಲಿ ನಡೆಯುವ ಆಕಸ್ಮಿಕ ಘಟನೆಗಳೂ ಹೆಚ್ಚಾಗುತ್ತವೆ. ಇದೇ ವೇಳೆ, ಆದಿ ಸುಬ್ರಹ್ಮಣ್ಯ ಸಮೀಪದ ತೋಟದಲ್ಲಿ ಒಂದು ಕಾಳಿಂಗ ಸರ್ಪ ಬಲೆಗೆ ಸಿಲುಕಿದ್ದು, ಜೀವ ಉಳಿಸಲು ಹೋರಾಡುತ್ತಿತ್ತು. ಈ ದೃಶ್ಯವನ್ನು ಗಮನಿಸಿದ ಸ್ಥಳೀಯರು ತಕ್ಷಣ ಉರಗ ಪ್ರೇಮಿ ಮಾಧವ ಅವರಿಗೆ ಮಾಹಿತಿಯನ್ನು ನೀಡಿದರು. ಮಾಧವ ಅವರು ತಕ್ಷಣ ಸ್ಥಳಕ್ಕೆ ತಲುಪಿದರು. ಅವರ ಪರಿಣಿತಿಯಿಂದ, ಕಾಳಿಂಗ ಸರ್ಪದ ಹೊಟ್ಟೆಯ ಭಾಗದಲ್ಲಿ ಸುತ್ತಿಕೊಂಡಿದ್ದ ಬಲೆಯ ತುಂಡನ್ನು ಎಚ್ಚರಿಕೆಯಿಂದ ತೆಗೆಯುತ್ತ, ಈ ಕಾಳಿಂಗ ಸರ್ಪವನ್ನು ಸಜೀವವಾಗಿ ಬಿಡುಗಡೆ ಮಾಡಲು ಪ್ರಾರಂಭಿಸಿದರು. ಬಲೆಯಿಂದ ಮುಕ್ತಗೊಂಡ ಕಾಳಿಂಗ ಸರ್ಪವು ಸಂತೋಷದಿಂದ ಕಾಡಿನತ್ತ ಸಾಗಿತು, ಮತ್ತು ಅದರ ದೃಶ್ಯವು ಪ್ರತಿಬಿಂಬಿತ ಮಾಡಿತು, ಮಾನವ ಮತ್ತು ಪ್ರಾಣಿಗಳ ನಡುವಿನ ಸಹಜ ಸಂಬಂಧ. ಈ ರಕ್ಷಣೆ ಕಾರ್ಯದಿಂದ, ಮಾಧವ ಅವರು ತಮ್ಮ ಅಪ್ರತಿಮ ಪ್ರೇಮ ಮತ್ತು ದಯೆಯಿಂದ ಕಾಳಿಂಗ ಸರ್ಪದ ಜೀವ ಉಳಿಸಲು ಯಶಸ್ವಿಯಾಗಿದ್ದಾರೆ. ಇದು ತಮ್ಮ ನಿಸ್ವಾರ್ಥ ಸೇವೆ ಹಾಗೂ ಪ್ರಾಣಿಗಳ ಕ್ಷೇಮವನ್ನು ಕಾಪಾಡಲು ಅವರ ಹತ್ತಿರ ಶ್ರಮವನ್ನು ಮತ್ತೊಮ್ಮೆ ಮೆಚ್ಚುಗೆಗೆ ಹಾರೈಸ...

ಜೇಸಿಐ ಉಪ್ಪಿನಂಗಡಿ ಘಟಕದಲ್ಲಿ LDMT ತರಬೇತಿ ಕಾರ್ಯಕ್ರಮ.

Image
ಉಪ್ಪಿನಂಗಡಿ : ಜೇಸಿಐ ಉಪ್ಪಿನಂಗಡಿ ಘಟಕದ ಆಡಳಿತ ಮಂಡಳಿ ಸದಸ್ಯರಿಗೆ 2025ನೇ ಸಾಲಿನ LDMT (Leadership Development Management Training) ತರಬೇತಿ ಕಾರ್ಯಕ್ರಮವು ಯಶಸ್ವಿಯಾಗಿ ಆಯೋಜನೆಗೊಂಡಿತು. ಕಾರ್ಯಕ್ರಮವನ್ನು ವಲಯ 15ರ 'ಇ' ಪ್ರಾಂತ್ಯದ ಉಪಾಧ್ಯಕ್ಷ ಮತ್ತು ಜೇಸಿಐ ಸೆನೆಟರ್ ಸುಹಾಸ್ ಮರಿಕೆ ಅವರು ನೀಡಿದ ಮಹತ್ವಪೂರ್ಣ ತರಬೇತಿಯ ಮೂಲಕ ಜೇಸಿಐ ಉಪ್ಪಿನಂಗಡಿ ಸದಸ್ಯರಿಗೆ ನಿರ್ವಹಣಾ ಹಾಗೂ ನಾಯಕತ್ವದ ಹಿರಿತನದ ಕೌಶಲ್ಯಗಳನ್ನು ವೃದ್ಧಿಸುವ ಅವಕಾಶವಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಜೇಸಿ ನಟೇಶ್ ಪೂಜಾರಿ ವಹಿಸಿದ್ದರು. ಅಧ್ಯಕ್ಷರೇ ಈ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ನಂತರ, ದಕ್ಷ ತರಬೇತಿದಾರರಾದ ಸುಹಾಸ್ ಮರಿಕೆ ಅವರು ಸದಸ್ಯರಿಗೆ ತಮ್ಮ ಬದ್ಧತೆ, ಜವಾಬ್ದಾರಿ ಮತ್ತು ತಂಡ ಪ್ರವರ್ತನೆಗೆ ಸಂಬಂಧಿಸಿದ ವಿವಿಧ ಮಾರ್ಗದರ್ಶನಗಳನ್ನು ನೀಡಿದರು. ಈ ತರಬೇತಿಯಲ್ಲಿ ಜೇಸಿಐ ಉಪ್ಪಿನಂಗಡಿ ಘಟಕದ ಪ್ರಮುಖ ಸದಸ್ಯರು ಭಾಗವಹಿಸಿದರು, ಅವರಲ್ಲು ನಿಕಟಪೂರ್ವ ಅಧ್ಯಕ್ಷರಾದ ಜೇಸಿ ಲವೀನಾ ಪಿಂಟೊ, ಜೇಸಿ ಸುರೇಶ್, ಜೇಸಿ ಸಂದೀಪ್, ಜೇಸಿ ಮಹೇಶ್ ಮತ್ತು ಪೂರ್ವ ವಲಯಾಧಿಕಾರಿ ಜೇಸಿ ಶೇಖರ್ ಗೌಡತ್ತಿಗೆ ಇತರರು ಸೇರಿದ್ದರು. ಈ ತರಬೇತಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವುದರ ಜೊತೆಗೆ, ಸಂಘಟನೆಗೂ ಹೆಚ್ಚು ಪರಿಣಾಮಕಾರಿ ನಿರ್ವಹಣೆ ಮತ್ತು ನಾಯಕತ್ವದ ಬಲವನ್ನು ಹೆಚ್ಚಿಸಲು ಕಾರಣವಾಯಿತು. 2025ನ...

"ಕರಾವಳಿ ನಾಡಿ" ಡಿಜಿಟಲ್ ಮಾಧ್ಯಮ ಲೋಕಾರ್ಪಣೆ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ

Image
ಕರಾವಳಿಯಲ್ಲಿ ನಿರೀಕ್ಷೆ ಮೂಡಿಸಿದೆ ಪತ್ರಕರ್ತ ಬಾಲಕೃಷ್ಣ ಭೀಮಗುಳಿಯವರ ಪ್ರಯತ್ನ ಕಾರ್ಕಳ , ಮಾ. 30: ರಾಜ್ಯದ ಮಾಧ್ಯಮ ಕ್ಷೇತ್ರದಲ್ಲಿ ತನ್ನದೆ ಆದ ಛಾಪು ಮೂಡಿಸಿದ್ದ  ಪತ್ರಕರ್ತ ಬಾಲಕೃಷ್ಣ ಬೀಮಗುಳಿ ಅವರು ಮುದ್ರಣ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮದ ಕಡೆಗೆ ದಿಕ್ಕು ಬದಲಿಸಿದ್ದಾರೆ.  ಹೊಸದಾಗಿ ಆರಂಭಿಸಿದ ಕರಾವಳಿನಾಡಿ ಯೂಟ್ಯೂಬ್,ವೆಬ್ ತಾಣ ಇದರ ಲೋಕಾರ್ಪಣೆಯು ಕಾರ್ಕಳದಲ್ಲಿ ರವಿವಾರ ನಡೆಯಿತು.  ಪತ್ರಿಕೋದ್ಯಮ ರಂಗದಲ್ಲಿ ಅನುಭವ ಪಡೆದು, ನೇರ, ನಿಷ್ಠುರ, ವಿಭಿನ್ನ ಬರಹಗಳ ಮೂಲಕ ವಿಶಿಷ್ಟವಾಗಿ ಗಮನ ಸೆಳೆಯುತಿದ್ದ ಯುವ ಪತ್ರಕರ್ತನ ಹೊಸ ಪ್ರಯತ್ನಕ್ಕೆ ಆರಂಭದಲ್ಲೆ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಈಗಾಗಲೇ ಕರಾವಳಿಯಲ್ಲಿ ಸದ್ದು ಮಾಡಲಾರಂಭಿಸಿದೆ.ಇವರ ಹೊಸ ಪ್ರಯತ್ನವು ಕರಾವಳಿ ನಾಡಿನ ಸಾಂಸ್ಕೃತಿಕ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಮಹತ್ವಪೂರ್ಣ ಬದಲಾವಣೆಯನ್ನು ತರಲು ಹೊರಟಿರುವುದು ಕಂಡುಬರುತ್ತಿದೆ.   *ಮಾಧ್ಯಮ ಕ್ಷೇತ್ರದಲ್ಲಿ ಯಶಸ್ವೀ ಪಯಣ*  ಯುವ ಪತ್ರ ಬಾಲಕೃಷ್ಣ ಬಿಮಗುಳಿ ಅವರು ತೀರಾ ಹಳ್ಳಿ ಪ್ರದೇಶದಲ್ಲಿ ಹುಟ್ಟಿ ಬೆಳೆದು ಬಂದವರು. ಮಾಧ್ಯಮ ಕ್ಷೇತ್ರದಲ್ಲಿ ತಮ್ಮ ಪ್ರವೇಶವನ್ನು ಕನ್ನಡಪ್ರಭ ಪತ್ರಿಕೆಯ ಮೂಲಕ ಆರಂಭಿಸಿದ್ದರು. ಅನಂತರ, ಕುಕ್ಕೆ ಸುಬ್ರಹ್ಮಣ್ಯ ಉದಯವಾಣಿ ಪತ್ರಿಕೆಯಲ್ಲಿ ದಿ. ವಿಠಲ್ ರಾವ್ ಅವರ ಮಾರ್ಗದರ್ಶನದಲ್ಲಿ ಅವರು ಸುಮಾರು 15 ವರ್ಷಗಳ ಕ...

ನೆಲ್ಯಾಡಿ ಶ್ರೀ ರಾಮ ವಿದ್ಯಾಲಯಯದಲ್ಲಿ ಸಾಮೂಹಿಕ ಹುಟ್ಟುಹಬ್ಬ.

Image
ದಿನಾಂಕ 29 ಮಾರ್ಚ್ 2025 ಶನಿವಾರದಂದು ಶ್ರೀರಾಮ ವಿದ್ಯಾಲಯ ನೆಲ್ಯಾಡಿಯಲ್ಲಿ ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಸಾಮೂಹಿಕ ಹುಟ್ಟುಹಬ್ಬ ವನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶಿಶುಮಂದಿರದ ಸಹಾಯಕಿಯಾದ ಶ್ರೀಮತಿ ಪುಷ್ಪವತಿ, ಶಿಶು ಮಂದಿರದ ಮಾತಾಜಿಯಾದ ಶ್ರೀಮತಿ ಸುಮಲತಾ ಹಾಗೂ ಶಾಲಾ ಅಡುಗೆ ಸಹಾಯಕರಾದ ಶ್ರೀಮತಿ ಕುಮುದ ಇವರು ವಿದ್ಯಾರ್ಥಿಗಳಿಗೆ ಆರತಿ ಎತ್ತಿ, ಹಣೆಗೆ ತಿಲಕವಿಟ್ಟು, ಬಾಯಿಗೆ ಸಿಹಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಆದ ಶ್ರೀಮತಿ ಭಾಗೀರಥಿಯವರು ಉಪಸ್ಥಿತರಿದ್ದೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಲ್ಲಾ ವಿದ್ಯಾರ್ಥಿಗಳು, ಶಾಲಾ ಶಿಕ್ಷಕ ವೃಂದದವರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ಶ್ರೀಮತಿ ಶುಭರಾಣಿ ಅವರು ಧನ್ಯವಾದವಿತ್ತು ,ಕುಮಾರಿ ರಮ್ಯಾ ಇವರು ಸ್ವಾಗತಿಸಿ, ಶ್ರೀಮತಿ ಕೋಮಲಾಂಗಿ ಮಾತಾಜಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕುಮಾರಧಾರ ಸೇತುವೆಯ ಮೇಲೆ ಭಕ್ತಾದಿಗಳು ನದಿಗೆ ತ್ಯಾಜ್ಯಗಳನ್ನು ಎಸೆಯದಂತೆ ಸೂಚನಾ ಫಲಕ. ನದಿ ನೀರಿಗೆ ಬಟ್ಟೆ, ಪ್ಲಾಸ್ಟಿಕ್, ಸೋಪು,ತ್ಯಾಜ್ಯ ವಸ್ತುಗಳನ್ನು ಎಸೆದರೆ ದಂಡ ಗ್ಯಾರಂಟಿ.

Image
ಸ್ವಾಮಿ ಸನ್ನಿಧಿ ವ್ಯಾಪಾರ ಮಳಿಗೆ ಪ್ರಾಯೋಜಕತ್ವದಲ್ಲಿ ಸೂಚನಾ ಫಲಕ ಅಳವಡಿಸಿದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್. ಕುಕ್ಕೆ ಸುಬ್ರಮಣ್ಯ ; ಮಾ,29,  ಕುಕ್ಕೆ ಸುಬ್ರಹ್ಮಣ್ಯ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರು. ಯಾರೋ ಜ್ಯೋತಿಷ್ಯರು ಹೇಳಿದ್ದಾರೆ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿ ಕುಮಾರಧಾರ ನದಿಯಲ್ಲಿ ಇಂದು ತಾವು ಉಟ್ಟ ಬಟ್ಟೆಗಳನ್ನು ಬಿಡಬೇಕು, ಬಟ್ಟೆಗಳನ್ನು ನದಿ ನೀರಲ್ಲಿ ಎಸೆಯಬೇಕು ಹೇಳಿದ ಕಾರಣ. ಕುಮಾರಧಾರ ನದಿ ಕಲುಷಿತಆಗುತ್ತದೆ, ನದಿ ನೀರಿನಲ್ಲಿ ವಾಸಿಸುವ ಜಲಚರಗಳಿಗೆ ತೊಂದರೆಯಾಗುತ್ತದೆ, ಸಾವಿರಾರು ಜನರು ಕುಮಾರಧಾರ ನದಿ ನೀರನ್ನು ಕುಡಿದು ಜೀವಿಸುತ್ತಾರೆ, ನಾವು ಪವಿತ್ರತೀರ್ಥವನ್ನು ಮಲಿನ ಮಾಡಬಾರದು ಎಂಬ ಸಾಮಾನ್ಯ ಜ್ಞಾನ ಇಲ್ಲದ ಭಕ್ತರು ಕುಮಾರಧಾರ ಸೇತುವೆ ಮೇಲಿನಿಂದ ಬಟ್ಟೆ ಇನ್ನಿತರ ತ್ಯಾಜ್ಯ ವಸ್ತುಗಳನ್ನು ನದಿನೀರಿಗೆ ಎಸೆದು,  ಕುಮಾರಧಾರನದಿಯ ಪವಿತ್ರತೀರ್ಥವನ್ನು ಕಲುಷಿತ ಮಾಡುತ್ತಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಯಾರು ನದಿ ನೀರಿಗೆ ತ್ಯಾಜ್ಯ ವಸ್ತುಗಳನ್ನು ಎಸೆಯಬಾರದು ಕಸ ಇನ್ನಿತರ ತ್ಯಾಜ್ಯ ವಸ್ತುಗಳನ್ನು ಎಸೆದರೆ ದಂಡ ವಿಧಿಸಲಾಗುವುದು, ಎಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಇಂದು ಸೇತುವೆಯ ಮೇಲೆ ಸೂಚನಾ ಫಲಕವನ್ನು ಅಳವಡಿಸಿದ್ದಾರೆ.  ಈ ಸೂಚನಾ ಫಲಕ ಪ್ರಾಯೋಜಕತ್ವವನ್ನ ಕುಕ್ಕೆ ಸುಬ್ರಹ್ಮಣ್ಯ ಶ್ರೀ ಸ್ವಾಮಿ ಸನ್ನಿಧಿ ಪೂಜಾ ಸಾಮಗ್ರಿಗಳು ಹಾಗೂ ವಿಗ...

ಉಪ್ಪಿನಂಗಡಿ: ಯುವಜನತೆಯ ಆತ್ಮವಿಶ್ವಾಸವನ್ನು ಜೇಸಿಐ ಸಂಸ್ಥೆ ಹೆಚ್ಚಿಸುತ್ತದೆ-ಜೇಸಿ ಮೋಹನಚಂದ್ರ.

Image
ಉಪ್ಪಿನಂಗಡಿ : ಅಂತಾರಾಷ್ಟ್ರೀಯ ಜೇಸಿಐ ಸಂಸ್ಥೆಯು ಯುವಜನತೆಗೆ ವೇದಿಕೆ ಕಲ್ಪಿಸಿ ಧೈರ್ಯ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ.ಇಂತಹ ವೇದಿಕೆಯನ್ನು ಬಳಸಿಕೊಂಡು ಅತ್ಯುತ್ತಮವಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಲು ಮುಂದಾಗಬೇಕೆಂದು ಉಪನ್ಯಾಸಕ ಮತ್ತು ವಲಯ 15ರ ವಲಯಾಧಕಾರಿ ಜೇಸಿ ಮೋಹನ್ ಚಂದ್ರ ತೋಟದ ಮನೆ ಜೇಸಿಐ ಉಪ್ಪಿನಂಗಡಿ ಘಟಕದ ಸಾಮಾನ್ಯ ಸಭೆಯಲ್ಲಿ ಸದಸ್ಯರಿಗೆ ತರಬೇತಿ ನೀಡಿ ಕರೆ ನೀಡಿದರು.ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಜೇಸಿ ನಟೇಶ್ ಪೂಜಾರಿ ವಹಿಸಿದ್ದರು.ಜೇಸಿ ಜಯಾನಂದ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು.ಜೇಸಿ ಗಣೇಶ್ ಜೇಸಿವಾಣಿ ವಾಚಿಸಿದರು.ಘಟಕದ ಕಾರ್ಯದರ್ಶಿ ಜೇಸಿ ಮಹೇಶ್ ವರದಿ ಮಂಡಿಸಿದರು. ನಿಕಟಪೂರ್ವ ಅಧ್ಯಕ್ಷರಾದ ಜೇಸಿ ಲವೀನಾ ಪಿಂಟೊ, ಜೇಸಿಐ ಉಪ್ಪಿನಂಗಡಿ ಟ್ರಸ್ಟ್ ಅಧ್ಯಕ್ಷ ಜೇಸಿ ಪ್ರಶಾಂತ್ ಕುಮಾರ್ ರೈ, ಪೂರ್ವವಲಯಾಧಿಕಾರಿ ಜೇಸಿ ಶೇಖರ್ ಗೌಂಡತ್ತಿಗೆ ಸಹಕರಿಸಿದರು.

ಅಧಿಕಾರಿಗಳು ಬೆರಳಿನ ತುದಿಯಲ್ಲೇ ಕೆಲಸ ಮಾಡಿಸುವ ಈ ಕಾಲದಲ್ಲಿ ,ಇಲ್ಲಿ ತಮ್ಮ ಸ್ವಂತ ಕೈಯಿಂದಲೇ ಸ್ವಚ್ಛತೆಯನ್ನ ಮಾಡಿ ಗಮನ ಸೆಳೆದಿದ್ದಾರೆ.

Image
ಜನಸಾಮಾನ್ಯರ ಮಧ್ಯೆ ಎಲ್ಲರಂತೆ ನಾನೂ ಸಾಮಾನ್ಯ ವ್ಯಕ್ತಿ ಎಂದು ತೋರಿಸಿಕೊಟ್ಟಿದ್ದಾರೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು. ಕುಮಾರಧಾರ ನದಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕುಕ್ಕೆ ಶ್ರೀ ದೇವಳದ ಅಧಿಕಾರಿಗಳು ಹಾಗೂ ನೌಕರರು ನದಿಯಲ್ಲಿ ಸ್ವಚ್ಛತೆಯನ್ನು ಮಾ.26ರಂದು ಮಾಡಿದ್ದಾರೆ. ಸುಬ್ರಹ್ಮಣ್ಯ  ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಹಾಗೂ ಪರಿಸರದ ಪ್ರದೇಶಗಳಲ್ಲಿ ವಿಪರೀತ ತ್ಯಾಜ್ಯ ವಸ್ತುಗಳನ್ನ ಭಕ್ತಾದಿಗಳು ಎಸೆದು ಇಡೀ ನೀರು ಹಾಗೂ ಪರಿಸರ ಮಲಿನಗೊಳಿಸುತ್ತಾರೆ.  ಶ್ರೀ ದೇವಳದ ವತಿಯಿಂದ ಅಲ್ಲಿಯ ನೌಕರರು ನೀರಿನಿಂದ ಎಷ್ಟೇ ತ್ಯಾಜ್ಯಗಳಾದ ಬಟ್ಟೆ ಬರೆಗಳನ್ನ ತೆಗೆದರೂ ಮತ್ತೆ ಮತ್ತೆ ಭಕ್ತಾದಿಗಳು ನೀರಲ್ಲೇ ಬಟ್ಟೆಗಳನ್ನ ಬಿಡುವ ಚಾಳಿಯನ್ನು ಮುಂದುವರಿಸುತ್ತಿರುವುದು ನೋವಿನ ವಿಚಾರ. ಇದನ್ನು ಗಮನಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಏಸುರಾಜ್ ಹಾಗೂ ಅಧಿಕಾರಿ ವೃಂದದವರು ಹಾಗೂ ಸುಮಾರು 150ಕ್ಕೂ ಮಿಕ್ಕಿ ನೌಕರರು ಸ್ವತಹ ಈ ದಿನ ಬುಧವಾರ ಕುಮಾರ ಸ್ಥಾನಘಟ್ಟದ ಪ್ರದೇಶದಲ್ಲಿ ನೀರಿಗಿಳಿದು ಬಟ್ಟೆ ಬರೆಗಳನ್ನು ಮೇಲಕೆತ್ತಿದ್ದಾರೆ. ರಾಶಿ ರಾಶಿಯಾಗಿ ಇದ್ದಂತ ಬಟ್ಟೆ ಬರೆಗಳನ್ನು ಗ್ರಾಮ ಪಂಚಾಯಿತಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಂದ ಅಧ್ಯಯನ ಭೇಟಿ.

Image
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದೊಂದಿಗೆ ಒಂದು ದಿನದ ಅಧ್ಯಯನ ಭೇಟಿಯನ್ನು ಪ್ರಥಮ ವರ್ಷದ ವಾಣಿಜ್ಯ ಪದವಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು. ಮುರುಳ್ಯದ ಕ್ಷೀರ ಎಂಟರ್ಪ್ರೈಸಸ್ ಇಲ್ಲಿಗೆ ಭೇಟಿ ನೀಡಿ ಈ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ರಾಘವ ಗೌಡ ಅವರ ಸಂಶೋಧನೆ ಮತ್ತು ಸಾಧನೆ, ಸಂಸ್ಥೆಯ ಈಗಿನ ಉತ್ಪನ್ನಗಳು ಹಾಗೂ ಯುವ ಪೀಳಿಗೆಗೆ ಪೂರಕವಾದ ವಿಚಾರಗಳನ್ನು ಸಂಸ್ಥೆಯ ಮಾಲಕರಾದ ಶ್ರೀಮತಿ ಮೈನಾ ಮತ್ತು ಶ್ರೀಮತಿ ಮಧು ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.  ಪಂಜದ ವನಸಿರಿ ಇಲ್ಲಿಗೆ ಭೇಟಿ ನೀಡಿ, ಇದರ ಮಾಲಕರಾದ ಶ್ರೀ ದಯಾಪ್ರಸಾದ್ ಚೀಮುಳ್ಳು ಇವರು ತಮ್ಮ ತೋಟದಲ್ಲಿ ಲಭ್ಯವಿರುವ ಸುಮಾರು ಒಂದು ಸಾವಿರಕ್ಕಿಂತ ಹೆಚ್ಚಿನ ವಿವಿಧ ಬಗೆಯ ಹಣ್ಣಿನ ತಳಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ಉಪನ್ಯಾಸಕ ರಮನಾಥ್ ಹಾಗೂ ಅಶ್ವಿನಿ ಎಸ್ .ಎನ್ ಸಂಯೋಜಿಸಿದರು.

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ಮತ್ತು ಸೆಂಟ್ ಮೇರಿಸ್ ಆರ್ಲ ಚರ್ಚ್ ಗಳಲ್ಲಿ ಸೆಂಟ್ ಜೋಸೆಫ್ ಹಬ್ಬ ಮತ್ತು ಪಿತೃ ವಂದನಾ ಕಾರ್ಯಕ್ರಮ.

Image
ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಎರಡು ಪ್ರಮುಖ ಚರ್ಚ್ ಗಳಾದ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರ ಮತ್ತು ಸೆಂಟ್ ಮೇರಿಸ್ ಚರ್ಚ್ ಆರ್ಲ ಇಲ್ಲಿ ಧಾರ್ಮಿಕ ಹಾಗೂ ವಿವಿದ ಮನೋ ರಂಜನ ಕಾರ್ಯಕ್ರಮಗಳ ಮೂಲಕ ವೈಭವೋಕ್ತ ವಾಗಿ ಪಿತೃ - ವಂದನಾ ಕಾರ್ಯಕ್ರಮ ಜರಾಗಲಾಯಿತು. ಪೂಜಾ ವಿಧಿಗಳೊಂದಿಗೆ ಆರಂಭವಾದ ಕಾರ್ಯಕ್ರಮ ವಿವಿದ ಮನೋರಂಜನ ಕ್ರೀಡೆ ಗಳ ಮೂಲಕ ಹಿರಿಯ ಕಿರಿಯ ವ್ಯತ್ಯಾಸ ವಿಲ್ಲದೆ ತಂದೆಯರು ಕಾರ್ಯಕ್ರಮ ದಲ್ಲಿ ಬಾಗವಹಿಸಿದರು. ವಿವಿದ ಕ್ರೀಡೆ ಗಳಲ್ಲಿ ಬಾಗವಹಿಸಿ ವಿಜೇತ ರಾದವರಿಗೆ ಬಹುಮಾನ ವಿತರಿಸಲಾಯಿತು. ಸಾಮಾನ್ಯ ವಾಗಿ ಮನೆಯಲ್ಲಿ ತಾಯಂದಿ ರಿಗೆ ವಿಶೇಷ ಆದ್ಯತೆ ಗೌರವ ಕೊಡುವ ಪರಿಪಾಠ ನಮ್ಮ ಸಂಸ್ಕೃತಿ ಯಲ್ಲಿದೆ ಅದೇ ರೀತಿಯಲ್ಲಿ ಸಮಾಜ ಮತ್ತು ಕುಟುಂಬ ನಿರ್ವಹಣೆ ಯಲ್ಲಿ ತಂದೆಯರ ಪಾತ್ರ ವನ್ನು ಸಮಾಜ ಗೌರವ ಪೂರ್ವಕವಾಗಿ ನೋಡಬೇಕೆಂದು ಧರ್ಮ ಕೇಂದ್ರ ದ ವಂದನಿಯಫಾ. ಷಾಜಿ ಮಾತ್ಯು  ಹೇಳಿದರು.

ಹರೀಶ್ ಇಂಜಾಡಿಯವರ ಬಗ್ಗೆ ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ/ಸುಬ್ರಹ್ಮಣ್ಯ ಗ್ರಾಮ ಕಾಂಗ್ರೆಸ್ ಸಮಿತಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ.

Image
ಹರೀಶ್ ಇಂಜಾಡಿಯವರ ಬಗ್ಗೆ ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಅವರಷ್ಟು ಸಮರ್ಥರು, ಅನುಭವಿ ಹಾಗೂ ಅರ್ಹರು ಬೇರೊಬ್ಬರಿಲ್ಲ ಹರೀಶ್ ಇಲ್ಲದೆ ಸುಬ್ರಹ್ಮಣ್ಯದಲ್ಲಿ ಕಾಂಗ್ರೆಸ್ ಇರಲಾರದು ಸುಬ್ರಹ್ಮಣ್ಯ ಗ್ರಾಮ ಕಾಂಗ್ರೆಸ್ ಸಮಿತಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ. ಕಾಂಗ್ರೆಸ್ ನ ಹರೀಶ್ ಇಂಜಾಡಿಯವರು ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾಗಿ ನೇಮಕ ಮಾಡಲು ಶಿಫಾರಸುಗೊಂಡಿರುವುದು ಈಗಾಗಲೇ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಅವರ ರಾಜಕೀಯ ವಿರೋಧಿಗಳು ಅವರಿಗೆ ಅವಕಾಶ ತಪ್ಪಿಸಲು ವಿವಿಧ ಕುತಂತ್ರಗಳನ್ನು ಮಾಡುತ್ತಿದ್ದಾರೆ. ದೃಶ್ಯಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಅವರೊಟ್ಟಿಗೆ ರೌಡಿಶೀಟರ್, ಕ್ರಿಮಿನಲ್ ಪ್ರಕರಣಗಳಿವೆ, ದೇವಸ್ಥಾನಕ್ಕೆ ಹಣ ಪಾವತಿಸಲು ಬಾಕಿ ಇರಿಸಿಕೊಂಡಿದ್ದಾರೆ ಎಂಬ ಅಪಪ್ರಚಾರ ನಡೆಸಿ ತೇಜೋವಧೆ ನಡೆಸುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಕಾಂಗ್ರೆಸ್‌ನ ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರಾದ ನಾವು ಸತ್ಯಾಂಶಗಳನ್ನು ಸ್ಪಷ್ಟಿಕರಿಸಲು ಬಯಸುವುದಾಗಿ  ಸುಬ್ರಹ್ಮಣ್ಯ ಗ್ರಾಮ ಕಾಂಗ್ರೆಸ್ ಸಮಿತಿ ಪತ್ರಿಕಾಗೋಷ್ಠಿಯಲ್ಲಿ ಮಾ.25 ರಂದು ತಿಳಿಸಿದೆ. ಕಳೆದ 23 ವರ್ಷಗಳ ಹಿಂದೆ ಅಂದರೆ 2002ನೇ ವರ್ಷದಲ್ಲಿ ಹರೀಶ್ ಇಂಜಾಡಿಯವರು ದೇವಸ್ಥಾನದ ಅಂಗಡಿಗಳನ್ನು ಹರಾಜಿನಲ್ಲಿ ಪಡಕೊಂಡು ಕಾರಣಾಂತರಗಳಿಂದ ನಷ್ಟ ಅನುಭವಿಸಿದ ಸಂರ್ಭದ...

ಕೆ ಎಸ್ ಎಸ್ ಕಾಲೇಜಿನಲ್ಲಿ ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ.

Image
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ದಿನಾಂಕ 25.3.2025 ರಂದು ಕಡಬ ಮತ್ತು ಸುಳ್ಯ ವಲಯದ ಎನ್ಎಸ್ಎಸ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ ಪಿ.ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾರ್ಯಕ್ರಮವನ್ನು ಕೆ.ಎಸ್.ಎಸ್ ಕಾಲೇಜಿನ ನಿಕಟಪೂರ್ವ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಮತ್ತು ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸಾದ ಎನ್ ಉದ್ಘಾಟಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ಪದವಿಯ ಸಹ ಪ್ರಾಧ್ಯಾಪಕರಾದ ಡಾ. ಅಕ್ಷತಾ ಕಾರಂತ ಅವರು ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯದ ಬಗ್ಗೆ ತರಬೇತಿಯನ್ನು ನೀಡಿದರು. ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯೋಜಕಿ ಲತಾ ಬಿ.ಟಿ ಹಾಗೂ ವಲಯದ ಸಹ ಸಂಯೋಜನಾಧಿಕಾರಿಯಾದ ಪ್ರೊ. ರಾಮಕೃಷ್ಣ ಕೆ ಎಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಸುಳ್ಯ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯ ಅತ್ಯುತ್ತಮ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಯನ್ನು ಪಡೆದ ಶ್ರೀಮತಿ ಚಿತ್ರಲೇಖ ಕೆ ಎಸ್ ಅವರನ್ನು ಸನ್ಮಾನಿಸಲಾಯಿತು. ಪದವಿ ಕಾಲೇಜುಗಳಾದ ನೆಲ್ಯಾಡಿ, ಬೆಳ್ಳಾರೆ, ಸುಳ್ಯ, ನೆಹರು ಮೆಮೋರಿಯಲ್ ಕಾಲೇಜ್, ವಿದ್ಯಾರಶ್ಮಿ ಕಾಲೇಜ್ ಸವಣೂರು ಅಲ್...

ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಂಬಂಧಿಸಿದ ವಿವಾದಿತ ಜಾಗ ಮತ್ತೆ ದೇವಾಲಯಕ್ಕೆ, ಕಟ್ಟಡ ತೆರವು.

Image
ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಂಬಂಧಿಸಿದ ಜಾಗವೊಂದು ನ್ಯಾಯಾಲಯದ ಮುಖಾಂತರ ಮತ್ತೆ ದೇವಾಲಯಕ್ಕೆ ಸುಪರ್ಧಿಗೆ ಬಂದಿದ್ದು ಅದರಲ್ಲಿದ್ದ ಕಟ್ಟಡ ತೆರವು ಇಂದು ನಡೆಯಿತು.  ಕಾಶಿಕಟ್ಟೆ ರಥಬೀದಿಯ ಮಧ್ತದ ಅಂಚೆ ಕಛೇರಿ ಮುಂಭಾಗದಲ್ಲಿ ಕುಕ್ಜೆ ಸುಬ್ರಹ್ಮಣ್ಯ ದೇವಾಲಯಕ್ಕೆ ಹಾಗೂ ಕುಂಞಕ್ಕ ಎಂಬವರಿಗೆ ಜಾಗದ ತಕರಾರು ಇತ್ತೆನ್ನಲಾಗಿದೆ. ಅದಕ್ಕೆ ಸಂಬಂಧಿಸಿದ ತಕರಾರು ನ್ಯಾಯಾಲಯದಲ್ಲಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು ಜಾಗವು ದೇವಾಲಯಕ್ಕೆ ಸಂಬಂಧಿಸಿದ ಜಾಗವೆಂದು ಆದೇಶ ವಾಗಿತ್ತು. ಇದರನ್ವಯ ಕಂದಾಯ ಇಲಾಖೆಯ ವತಿಯಿಂದ ಜಾಗದ ಹಕ್ಕನ್ನು ದೇವಾಲಯಕ್ಕೆ ಹಸ್ತಾಂತರಿಸಿದ್ದು ಅದರಂತೆ ಜಾಗದಲ್ಲಿದ್ದ ಹಳೆ ಕಟ್ಟಡ ತೆರವು ಕಾರ್ಯಾಚರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಅಧಿಕಾರಿಗಳು, ಸಿಬ್ಬಂದಿಗಳು ಭದ್ರತಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕೆ.ಎಸ್‌.ಎಸ್ ಕಾಲೇಜಿನ ರೇಂಜರ್ ವಿದ್ಯಾರ್ಥಿಗಳು ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ಭಾಗವಹಿಸಿದರು.

Image
ದಿನಾಂಕ 10/03/2025 ರಿಂದ 12/03 ದ/2025 ರ ವರೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಉಡುಪಿ ಅಲ್ಲಿ ನಡೆದ ರಾಜ್ಯಮಟ್ಟದ ಚಾರಣ ಪ್ರಕೃತಿ ಅಧ್ಯಯನ ಮತ್ತು ಸ್ವಚ್ಛತಾ ಶಿಬಿರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆ ಎಸ್ ಎಸ್ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ರಾಜ್ಯ ಪುರಸ್ಕಾರ ಪಡೆದ ರೇಂಜರ್ ವಿದ್ಯಾರ್ಥಿ ಶರಣ್ಯ ಮತ್ತು ಕವಿತಾಕ್ಷಿ ಅವರು ಭಾಗವಹಿಸಿರುತ್ತಾರೆ

ಕೆ ಎಸ್ ಎಸ್ ಕಾಲೇಜು ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ.

Image
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದಿಂದ 20 ಮಾರ್ಚ್ 2025 ವಿಧಾನಸಭೆಯ ಅಧಿವೇಶನಕ್ಕೆ ಅಂತಿಮ ಬಿ ಎ ವಿದ್ಯಾರ್ಥಿಗಳು ಶೈಕ್ಷಣಿಕ ಭೇಟಿ ನೀಡಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಸ್ವಾತಿ ಕೆ ಮತ್ತು ಉಪನ್ಯಾಸಕ ಭರತ್ ಎಂ.ಎಲ್ ಅವರ ಮಾರ್ಗದರ್ಶನದಲ್ಲಿ ಮತ್ತು ಪ್ರಾಕ್ತನ ವಿದ್ಯಾರ್ಥಿ ಜಯಪ್ರಕಾಶ್ ಎಂ.ಸಿ a ಅವರ ಸಹಕಾರದೊಂದಿಗೆ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಂಡು ಕಾರ್ಯಕಲಾಪ ವೀಕ್ಷಿಸಿದರು. ವಿಧಾನಸಭಾ ಸಚಿವಾಲಯದ ಸಿಬ್ಬಂದಿ ಜ್ಞಾನಶೇಖರ್ ವಿದ್ಯಾರ್ಥಿಗಳಿಗೆ ವಿಧಾನಸಭೆಯ ಸವಿವರ ಮಾಹಿತಿ ನೀಡಿದರು.ವಿದ್ಯಾರ್ಥಿಗಳಿಂದ ವಿಧಾನಸಭೆ ಭೇಟಿ

ಕುಕ್ಕೆ ದೇವಳಕ್ಕೆ ರಾಜ್ಯ ಸಾಂಸ್ಥಿಕ ಹಾಗೂ ಯೋಜನಾ ಸಚಿವ ಸುಧಾಕರ್ ಭೇಟಿ.

Image
ಸುಬ್ರಮಣ್ಯ ಮಾ.22: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಸರ್ಕಾರದ ಸಾಂಸ್ಥಿಕ ಹಾಗೂ ಯೋಜನಾ ಸಚಿವ ಸುಧಾಕರ್ ಇಂದು ಮಧ್ಯಾಹ್ನ ಭೇಟಿ ನೀಡಿದರು. ಸಚಿವರನ್ನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್ ಅವರು ಸ್ವಾಗತಿಸಿ ಬರಮಾಡಿಕೊಂಡರು. ಸಚಿವರು ಇಂದು ಸುಬ್ರಮಣ್ಯದಲ್ಲಿ ತಂಗಿ ನಾಳೆ ಆಶ್ಲೇಷ ಬಲಿ ಪೂಜೆ ಹಾಗೂ ತುಲಾಭಾರ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕುಕ್ಕೆ ದೇವಳಕ್ಕೆ ಮಧೂರು ದೇವಳದಿಂದ ಆಮಂತ್ರಣ.

Image
ಸುಬ್ರಹ್ಮಣ್ಯ : ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆಯ  ಆಮಂತ್ರಣ ಪತ್ರಿಕೆಯನ್ನು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೀಡಲಾಯಿತು.ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರಿಗೆ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಶ್ರೀ ದೇವಳಕ್ಕೆ ಆಗಮಿಸಿ ನೀಡುವ ಮೂಲಕ ವಿರಾಟ್ ದೇವತಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬಳಿಕ ಶ್ರೀ ದೇವಳದಿಂದ ಬೋಜನ ಸಾಮಾಗ್ರಿ ಸೇರಿದಂತೆ ಹಸಿರು ಕಾಣಿಕೆಯನ್ನು ಶ್ರೀ ದೇವಳದಿಂದ ಮಧೂರು ದೇವಳಕ್ಕೆ ಹಸ್ತಾಂತರಿಸಲಾಯಿತು.  ಮಧೂರು ಕ್ಷೇತ್ರದಲ್ಲಿ ಕಳೆದ ಹಲವಾರು ವರ್ಷಗಳಿಂದ ಕುಕ್ಕೆ ದೇವಳದಿಂದ ನಡೆಸುವ ವಸತಿ ಛತ್ರವಿದೆ.ಇದರಿಂದ ಕ್ಷೇತ್ರಕ್ಕೆ ಬರುವ ಭಕ್ತರಿಗೆ ಹೆಚ್ಚು ಅನುಕೂಲತೆ ಒದಗಿದೆ.ಈ ಸಂದರ್ಭ ಶ್ರೀ ದೇವಳದ ಅಭಿಯಂತರ ಉದಯ ಕುಮಾರ್, ಶ್ರೀ ದೇವಳದ ಕೆ.ಎಂ.ಗೋಪಿನಾಥ್ ನಂಬೀಶ, ಸರಸ್ವತಿ ಉಪಸ್ಥೀತರಿದ್ದರು.

ಕುಕ್ಕೆ ದೇವಳದಿಂದ ವಿದ್ಯಾರ್ಥಿಗಳಿಗೆ 7ಲಕ್ಷದ 5ಸಾವಿರ ರೂ ದತ್ತಿನಿಧಿ ಹಸ್ತಾಂತರ ಎಸ್‌ಎಸ್‌ಪಿಯು ವಿದ್ಯಾರ್ಥಿಗಳಿಗೆ ದತ್ತಿನಿಧಿ ಹಸ್ತಾಂತರಿಸಿ ಇಒ ಅರವಿಂದ ಅಯ್ಯಪ್ಪ ಸುತಗುಂಡಿ ಹೇಳಿಕೆ.

Image
ಸುಬ್ರಹ್ಮಣ್ಯ : ಕುಕ್ಕೆ ದೇವಳವು ವಿದ್ಯಾದಾನಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ.ಶ್ರೀ ದೇವಳದ ಆಡಳಿತದಲ್ಲಿರುವ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿದ ವಿದ್ಯಾರ್ಥಿಗಳಿಗೆ ರೂ.7ಲಕ್ಷ 5ಸಾವಿರ ರೂವನ್ನು ದತ್ತಿನಿಧಿಯಾಗಿ ಹಸ್ತಾಂತರಿಸಿದ್ದೇವೆ.ಇದರಿAದ ಉನ್ನತ ವ್ಯಾಸಂಗ ಮಾಡುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ.ಅಲ್ಲದೆ ಈಗ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಇದು ಸ್ಪೂರ್ತಿಯಾಗುತ್ತದೆ ಎಂದು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಮತ್ತು ಎಸ್‌ಎಸ್‌ಪಿಯು ಕಾಲೇಜಿನ ಕಾರ್ಯದರ್ಶಿ ಅರವಿಂದ ಅಯ್ಯಪ್ಪ ಸುತಗುಂಡಿ ಹೇಳಿದರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಠ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸೋಮವಾರ ದತ್ತಿನಿಧಿ ವಿತರಿಸಿ ಅವರು ಮಾತನಾಡಿದರು.ಶ್ರೀ ದೇವಳದಿಂದ ನೀಡುವ ಅನುಕೂಲತೆಗಳನ್ನು ಬಳಸಿಕೊಂಡು ಉತ್ತಮ ಅಂಕ ಪಡೆದು ಉನ್ನತಿ ಸಾಧಿಸುವತ್ತ ವಿದ್ಯಾರ್ಥಿಗಳ ಚಿತ್ತವಿರಬೇಕು. ಅಲ್ಲದೆ ದೇವಳದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ ಎಂದರು ಪ್ರಸಾದ ರೂಪಿ ಜ್ಞಾನ: ಗಬ್ಲಡ್ಕ  ಶ್ರೀ ದೇವಳದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುವುದು ಕೇವಲ ಕಲಿಯುವಿ...

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ.

Image
 ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಬ್ರಾಂಡ್ ರಂಗೋಲಿ ಸ್ಪರ್ಧೆಯಲ್ಲಿ ಸಿಂಚನ ಪಿ ಹಾಗೂ ಭಾರತಿ ಎಂ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜ್ (ಸ್ವಾಯತ್ತ) ಉಜಿರೆ, ಆಯೋಜಿಸಿದಂತಹ ರಾಷ್ಟ್ರೀಯ ಮಟ್ಟದ ಅಂತರ್ ಕಾಲೇಜು ಕಾಮರ್ಸ್ ಹಾಗೂ ಮ್ಯಾನೇಜ್ಮೆಂಟ್ ಫೆಸ್ಟ್ ನಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಮುಖ ವರ್ಣಿಕೆ ಸ್ಪರ್ಧೆಯಲ್ಲಿ ದೀಕ್ಷಾ ಎಂ ಕೆ ಹಾಗೂ ರಶ್ಮಿ ಎನ್ ಎಲ್ ಅವರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನಿಂದ ಅಸಿಸ್ಟೆಂಟ್ ಗವರ್ನರ್ ಕ್ಲಬ್ ಅಸೆಂಬ್ಲಿ.

Image
ಸುಬ್ರಹ್ಮಣ್ಯ ಮಾ .21: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಮುಂದಿನ ತಿಂಗಳು ಡಿಸ್ಟ್ರಿಕ್ಟ್ ಗವರ್ನರ್ ವಿಕ್ರಮದತ್ತ ಅವರು ಭೇಟಿ ನೀಡುವ ಸಮಯದಲ್ಲಿ ಪೂರ್ವ ತಯಾರಿ ಹಾಗೂ ಪರಿಶೀಲನೆಗಾಗಿ ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ವಿನಯಕುಮಾರ ಬೆಳ್ಳಾರೆ ಅವರು ಏನೇ ಕಲ್ಲಿನ ರೈತ ಯುವಕ ಮಂಡಲ ಸಭಾಭವನದಲ್ಲಿ ಬುಧವಾರ ಕ್ಲಬ್ಬೆಸೆಂಬ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸುಬ್ರಹ್ಮಣ್ಯ ರೋಟೋರಿ ಕ್ಲಬ್ ನವರು ಈ ವರ್ಷದ ಆರಂಭದ ಜುಲೈಯಿಂದ ಇಲ್ಲಿವರೆಗೆ ಆದ ಕಾರ್ಯಕ್ರಮಗಳು, ಪದಾಧಿಕಾರಿಗಳ ಜವಾಬ್ದಾರಿಗಳು, ಅಂತರಾಷ್ಟ್ರೀಯ ಸಂಸ್ಥೆಗೆ ಕಳುಹಿಸಿದ ದೇಣಿಗೆಗಳು, ಸಮಾಜ ಸೇವೆಯಲ್ಲಿ ನೀಡಿದ ಮಹತ್ತರ ಕೊಡುಗೆಗಳು, ನಡೆಸಿದ ಹಾಗೂ ಭಾಗವಹಿಸಿದ ತರಬೇತಿಗಳು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು ಮುಂತಾದ ದಾಖಲೆಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜೋನಲ್ ಲಿಫ್ಟಿನೆಂಟ್ ವಿಶ್ವನಾಥ ನಡು ತೋಟ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ಚಂದ್ರಶೇಖರ ನಾಯರ್ ಅಗತ್ಯ ದಾಖಲೆಗಳನ್ನು ನೀಡಿದರು. ವೇದಿಕೆಯಲ್ಲಿ ನಿಕಟಪೋರ್ವ ಅಧ್ಯಕ್ಷ ಪ್ರಶಾಂತ್ ಕೋಡಿಬೈಲ್, ಕಾರ್ಯದರ್ಶಿ ಚಿದಾನಂದ ಕುಳ, ನಿಯೋಜಿತ ಅಧ್ಯಕ್ಷ ಜಯಪ್ರಕಾಶ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹಿರಿಯ ರೋಟೆರಿಯನ್ಸ್ ಆದ ಕಾರ್ಯಪ್ಪ ಗೌಡ ಪುಂಡಿಗದ್ದೆ ಹಾಗೂ ಸುದರ್ಶನ ಶೆಟ್ಟಿ ಶಾರದ ಗಾರ್ಡನ್ ಇವರುಗಳ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಸಭ...

ಕೆ.ಎಸ್ ಎಸ್ ಕಾಲೇಜಿನಲ್ಲಿ ಭಾರತ್ ಸ್ಕೌಟ್ ಅಂಡ್ ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತಕರಾದ ಪಿ .ಜಿ ಆರ್ ಸಿಂಧ್ಯಾ ಅವರ ಸಂವಾದ ಕಾರ್ಯಕ್ರಮ.

Image
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿನಾಂಕ 21 ಮಾರ್ಚ್ 2025 ರಂದು ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ ದಿನೇಶ ಪಿ ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಅದರ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ ಅವರು ವಿದ್ಯಾರ್ಥಿ ಗಳಿಗೆ ಶಿಸ್ತು ,ಸಂಯಮ, ಆಹಾರ ಪದ್ಧತಿ, ವೈಜ್ಞಾನಿಕತೆ, ನಾಯಕತ್ವ ಗುಣ, ಸಮಯ ಪ್ರಜ್ಞೆ, ಸ್ಕೌಟ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹತ್ವದ ಬಗ್ಗೆ ಸ್ಫೂರ್ತಿದಾಯಕ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳು ಸಂವಾದದಿಂದಾದ ಅನುಭವಗಳನ್ನು ಹಂಚಿಕೊಂಡರು. ರೋವರ್ಸ್ ಮತ್ತು ರೇಂಜರ್ಸ್ ನ ನಿಪುನ್ ಪರೀಕ್ಷೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನವನ್ನು ಪಿ .ಜಿ. ಆರ್ ಸಿಂಧ್ಯಾ ಅವರು ಮಾಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಆಯೋಜನ ಆಯುಕ್ತರಾದ ಶ್ರೀ ಭರತ್ ರಾಜ್ ಕೆ, ಪಂಜ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಶ್ರೀ ಮಾಧವ ಬಿ ಕೆ, ಉಪಾಧ್ಯಕ್ಷ ದಾಮೋದರ್ ನೇರಳ, ಹಾಗೂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಶ್ರೀ ಕೆ. ರಂಗಯ್ಯ ಶೆಟ್ಟಿಗಾರ್, ರೋವರ್ ಸ್ಕೌಟ್ ಲೀಡರ್ ಶ್ರೀ ಮನೋಹರ, ರೇಂಜರ್ ಲೀಡರ್ಸ್ಗಳಾದ ಪ್ರಮೀಳಾ ಎನ್ ...

ಕಡಬ ವಿದ್ಯಾರ್ಥಿ ನಿಲಯಕ್ಕೆ ಲೋಕಾಯುಕ್ತ ಪೊಲೀಸರ ದಿಢೀರ್ ಭೇಟಿ:ಆಹಾರ ಪದಾರ್ಥಗಳಲ್ಲಿ ಹುಳಗಳು ಪತ್ತೆ.

Image
ಇಲ್ಲಿನ ಸರ್ಕಾರಿ ಕಾಲೇಜು ಬಳಿ ಇರುವ ಬಾಲಕರ ವಸತಿನಿಲಯಕ್ಕೆ  ಲೋಕಾಯುಕ್ತ ಪೊಲೀಸರ ತಂಡ ಬುಧವಾರ ದಿಢೀರ್ ಭೇಟಿ ನೀಡಿದ್ದು ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳೇ ಅಚ್ಚರಿಕೊಂಡಿದ್ದಾರೆ. ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರ್‌ಚಂದ್ರ ಮತ್ತು ಡಿವೈಎಸ್‌ಪಿ ಗಾನಾ ಪಿ.ಕುಮಾರ್ ಮತ್ತು ಇನ್ಸ್‌ಪೆಕ್ಟರ್ ಚಂದ್ರಶೇಖರ್ ನೇತೃತ್ವದಲ್ಲಿ ಲೋಕಾಯುಕ್ತ ಸಿಬ್ಬಂದಿ ಬಾಲಕರ ವಸತಿಗೃಹದಲ್ಲಿ ತಪಾಸಣೆ ನಡೆಸಿದರು. ಈ ವೇಳೆ ಕಳಪೆ ಆಹಾರ ಪೂರೈಕೆ, ಸಿಸಿ ಕ್ಯಾಮರಾ ಸರಿಯಿಲ್ಲದ ವಿಚಾರ, ಮ್ಯಾಟ್ ಮಾರಾಟ ಆರೋಪ,  ಸುರಕ್ಷತಾ ಸಿಬ್ಬಂದಿ, ವಾರ್ಡನ್‌ಗಳೇ ಇಲ್ಲದಿರುವುದು ಸೇರಿದಂತೆ ಹಲವಾರು ವಿಚಾರಗಳು ಬೆಳಕಿಗೆ ಬಂದಿವೆ. ವಾರ್ಡನ್ ಸೇರಿದಂತೆ  ಸಿಬ್ಬಂದಿ ಹಾಸ್ಟೇಲ್ಗೆ ಸರಿಯಾಗಿ ಬಾರದಿರುವುದು ಮತ್ತು ಮಕ್ಕಳಿಗಾಗಿ ಬಂದಿರುವ ರಬ್ಬರ್ ‌ಸ್ಪೋರ್ಟ್ಸ್ ಮ್ಯಾಟ್‌ಗಳಲ್ಲಿ ಸುಮಾರು 110 ಮ್ಯಾಟ್‌ಗಳ ಮಾರಾಟ ಮತ್ತು ಆಹಾರದ ಗುಣಮಟ್ಟದ ಕುರಿತು ಅಧಿಕಾರಿಗಳಿಗೆ ಇಲ್ಲಿನ ಮಕ್ಕಳು ವಿವರಿಸಿದರು .ಕೂಡಲೇ ಅಡುಗೆ ಸಾಮಗ್ರಿ ಸಂಗ್ರಹಿಸಿಟ್ಟಿದ್ದ ಸ್ಥಳದಲ್ಲಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಆಹಾರ ಪದಾರ್ಥಗಳಲ್ಲಿ ಹುಳಗಳು ಸಂಚರಿಸುವುದನ್ನು ಕಣ್ಣಾರೆ ಕಂಡಿದ್ದಾರೆ. ರೂಮ್‌ಗಳಲ್ಲಿ ಬೆಳಕಿನ ಕೊರತೆ, ಕೆಲವು ಮಕ್ಕಳು ತಾವೇ ಅಕ್ವೇರಿಯಂ ಸೇರಿದಂತೆ ಇತರ ವಸ್ತುಗಳನ್ನು ತಂದಿರುವ ಬಗ್ಗೆ, ಹಾಜರಾತಿ ಪುಸ್ತಕದಲ್ಲಿ ಮಕ್ಕಳು ಮತ್ತು ಅಧಿಕಾರಿಗಳ ಸಹ...

ನಾಳೆ ಮಾ.21: ಸುಬ್ರಹ್ಮಣ್ಯದಲ್ಲಿ ವಿಶ್ವ ಮಹಿಳಾ ದಿನಾಚರಣೆ.

Image
ಸುಬ್ರಹ್ಮಣ್ಯ ಮಾ.20: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ತರಬೇತುದಾರರ ಸಂಚಲನ ಸಮನ್ವಯ ಸಮಿತಿ ಮಂಗಳೂರು, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ( ರಿ) ಸುಳ್ಯ , ಶ್ರೀ ವಾಣಿ ವನಿತಾ ಸಮಾಜ ಸುಬ್ರಹ್ಮಣ್ಯ ,ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ( ನಿ) ಸುಬ್ರಹ್ಮಣ್ಯ ,ಇನ್ನರ್ವೀಲ್ ಕ್ಲಬ್ ಸುಬ್ರಹ್ಮಣ್ಯ ,ಓಂ ಶ್ರೀ ಸಂಜೀವಿನಿ ಗ್ರಾಮಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಮಣ್ಯ ,ಶ್ರೀ ಶಕ್ತಿ ಸಂಘಗಳು ಮತ್ತು ನವೋದಯ ಸ್ವಸಹಾಯ ಸಂಘಗಳು ಸುಬ್ರಹ್ಮಣ್ಯ, ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸುಬ್ರಮಣ್ಯ ಇವುಗಳ ಸಂಯುಕ್ತ ಆಶಯದಲ್ಲಿ ನಾಳೆ ಮಾರ್ಚ್ 21 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕುಮಾರಧಾರ ಸಭಾಭವನದಲ್ಲಿ ಆಚರಿಸಲಾಗುವುದೆಂದು ಸಂಘಟಕರು ತಿಳಿಸಿರುತ್ತಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಎದುರುಗಡೆಯಿಂದ ಗ್ರಾಮ ಪಂಚಾಯತ್ ಸಭಾಭವನದವರೆಗೆ ನಾರಿ ಶಕ್ತಿ ಜಾಥ ನಡೆಯಲಿರು ರುವುದು. ತದನಂತರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿರುವುದು

ಸುಬ್ರಹ್ಮಣ್ಯ ಕಾಲೇಜು ವಿದ್ಯಾರ್ಥಿಗಳಿಂದ ಬಸ್ಸಿನ ಅವ್ಯವಸ್ಥೆ ಬಗ್ಗೆ ಬೇಡಿಕೆ ಪ್ರತಿಭಟನೆ ಈಡೇರದಿದ್ದಲ್ಲಿ ಉಗ್ರ ಪ್ರತಿಭಟನೆ ಎಚ್ಚರಿಕೆ.

Image
ಸುಬ್ರಹ್ಮಣ್ಯ ; ಮಾ. 20: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಬ್ರಹ್ಮಣ್ಯ ಬಸ್ ನಿಲ್ದಾಣದಿಂದ ಬೆಳಿಗ್ಗೆ ಹಾಗೂ ಸಂಜೆಯ ಸಮಯ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು,  ಕೂಡಲೇ ಬಸ್ಸಿನ ವ್ಯವಸ್ಥೆ ಸರಿಪಡಿಸಬೇಕಾಗಿ ಕೆ ಎಸ್ ಎಸ್ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ ಕೆ ಎಸ್ ಎಸ್ ಕಾಲೇಜಿನಿಂದ ಕಾಲ್ನಡಿಗೆ ಮೂಲಕ ಹೊರಟ ವಿದ್ಯಾರ್ಥಿಗಳ ಜಾಥವು ಮುಖ್ಯ ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ಕೆಎಸ್ಆರ್ಟಿಸಿ ನಿಲ್ದಾಣದವರೆಗೆ ಆಗಮಿಸಿ ಪ್ರತಿಭಟನೆಯಲ್ಲಿ ತೊಡಗಿದರು. ಅಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎಬಿವಿಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಮಾತನಾಡಿದರು. ಅಷ್ಟೊತ್ತಿಗೆ ಅಲ್ಲಿಗೆ ಆಗಮಿಸಿದ ಸುಬ್ರಹ್ಮಣ್ಯ ಬಸ್ ನಿಲ್ದಾಣದ ಸಂಚಾರ ನಿಯಂತ್ರಣ ಅಧಿಕಾರಿಗಳಾದ ಬಾಬು ಹಾಗೂ ರಾಮಚಂದ್ರರವರು ಪ್ರತಿಭಟನಾಕಾರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಆರಂಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ಹೋಗಲು ಇದ್ದಂತ ಬಸ್ಸಿನ ಅ ವ್ಯವಸ್ಥೆ ಬಗ್ಗೆ ವಿವರಿಸಿದರು. ಅಲ್ಲದೆ ಈ ಹಿಂದೆ ಎಷ್ಟೇ ಮನವಿ ಸಲ್ಲಿಸಿದ ರೂ ಏನು ಪ್ರಯೋಜನ ಆಗಿಲ್ಲ. ಬೆಳಗ್ಗೆ ಕಾಲೇಜಿಗೆ ಬರಲು ಹಾಗೂ ಸಂಜೆ ಮನೆಗೆ ತಲುಪಲು ತುಂಬಾ ತೊಂದರೆ ಆಗುತ್ತಿದೆ ...

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ.

Image
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿಯನ್ನು ನೀಡಿದರು. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿದರು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಶೈಲಾ ಅವರು ಸಂಸ್ಥೆಯ ಉದ್ದೇಶವನ್ನು ಹಾಗೂ ವಿದ್ಯಾರ್ಥಿಗಳು ನ್ಯೂನತೆಯನ್ನು ಹೊಂದಿದ್ದರು ವಿದ್ಯಾರ್ಥಿಗಳಲ್ಲಿ ಪ್ರತಿಭೆ ಯಿದೆ ಎಂಬುದನ್ನು ತಿಳಿಸಿದರು. ಎನ್ ಎಸ್ ಎಸ್ ಸ್ವಯಂಸೇವಕರು ವಿದ್ಯಾರ್ಥಿಗಳಿಗೆ ಹಣ್ಣು ಹಾಗೂ ಸಿಹಿ ತಿಂಡಿಗಳನ್ನು ನೀಡಿದರು. ಹಸ್ತವಿ ಸ್ವಾಗತಿಸಿ, ಅಂಕಿತ ಕಾರ್ಯಕ್ರಮವನ್ನು ನಿರೂಪಿಸಿ, ಅರ್ಚನಾ ವಂದಿಸಿದರು

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರಲ್ಲಿ ಸಂತ ಜೋಸೆಫ್ ದಿನಾಚರಣೆ ಮತ್ತು ಹಿರಿಯ ನಾಗರಿಕರ ಸಮ್ಮಿಲನ .

Image
ನೆಲ್ಯಾಡಿ , 19 ಮಾರ್ಚ್ 2025 (ಬುಧವಾರ): ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಸಂತ ಜೋಸೆಫ್ ದಿನಾಚರಣೆ ಹಾಗೂ ವಯಸ್ಕರ ಸಮ್ಮಿಲನ ವಿಜೃಂಭಣೆಯಿಂದ ನೆರವೇರಿತು. ಈ ಮಹತ್ವದ ಕಾರ್ಯಕ್ರಮದಲ್ಲಿ ನೆಲ್ಯಾಡಿ ಸಂತ ಅಲ್ಫೋನ್ಸ ಮತ್ತು ಆರ್ಲ ಸೆಂಟ್ ಮೇರಿಸ್ ಚರ್ಚ್ ಸದಸ್ಯರು ಭಾಗವಹಿಸಿದರು. ಒಟ್ಟು 70 ಮಂದಿ ಈ ಕಾರ್ಯಕ್ರಮಕ್ಕೆ ಹಾಜರಿದ್ದು, ಅವರಿಗೆ ಸನ್ಮಾನ ಹಾಗೂ ಸ್ನೇಹ ಔತಣದ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದ ಆಯೋಜಕರಾಗಿ ಮಾತೃ ವೇದಿಕೆ, ವಿನ್ಸೆಂಟ್ ಡಿ ಪೌಲ್ ಸೊಸೈಟಿ, ಎಸ್.ಎಂ.ವೈ.ಎಂ. ಯುವಜನರು ಹಾಗೂ ಚರ್ಚ್ ನ ಟ್ರಸ್ಟಿಗಳು ಸಕ್ರಿಯವಾಗಿ ಪಾಲ್ಗೊಂಡರು. ಸಮಾರಂಭದ ಆರಂಭದಲ್ಲಿ ಪ್ರಾರ್ಥನೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬಳಿಕ ಸಂತ ಜೋಸೆಫ್ ಜೀವನದ ಮಹತ್ವ, ಅವರ ತ್ಯಾಗ ಹಾಗೂ ಸೇವೆಯ ಕುರಿತು ವಿಶ್ಲೇಷಣಾತ್ಮಕ ಪ್ರವಚನ ನೀಡಲಾಯಿತು. ಹಿರಿಯ ನಾಗರಿಕರನ್ನು ಗೌರವಿಸುವ ಉದ್ದೇಶದಿಂದ ಸನ್ಮಾನ ಸಮಾರಂಭ ಆಯೋಜಿಸಲಾಯಿತು. ಕಾರ್ಯಕ್ರಮದ ಅಂತ್ಯಕ್ಕೆ ಎಲ್ಲ ಸದಸ್ಯರು ಸ್ನೇಹ ಔತಣ ಸೇವಿಸಿ ಪರಸ್ಪರ ಅನುಭವ ಹಂಚಿಕೊಂಡರು. ವಯಸ್ಕರ ಸಮಾವೇಶವು ಸದಭಿಪ್ರಾಯ ವಿನಿಮಯ ಮತ್ತು ಹಿರಿಯ ನಾಗರಿಕ ರ ಬಗ್ಗೆ ಇರ ಬೇಕಾದ ಕಾಳಜಿಯ ಬಗ್ಗೆ ಬೆಳಕು ಚೆಲ್ಲುವಂತಿತ್ತು. ಇಂತಹ ಸಾಮಾಜಿಕ ಕಾರ್ಯಕ್ರಮಗಳು ಭವಿಷ್ಯದಲ್ಲೂ ಮುಂದುವರಿಯಲಿ ಎಂದು ಚರ್ಚ್ ನ ಧರ್ಮ ಗುರುಗಳಾದ ವಂದನಿಯ ಶಾಜಿ ಮಾತ್ಯು ಶುಭ ಹಾರೈಸಿದರು.

ಕುಕ್ಕೆ ಸುಬ್ರಹ್ಮಣ್ಯ ಮಾನಾಡು ರಸ್ತೆಗೆ ಗುದ್ದಲಿ ಪೂಜೆ.

Image
ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿವ್ಯಾಪ್ತಿಗೆ ಒಳಪಡುವ ,ಕೊರಗ ತನಿಯ ದೈವಸ್ಥಾನದ ಬಳಿ ಸ್ಥಳಾಂತರಿಸಲಾದ ದೇವರಗದ್ದೆ -ಮಾನಾಡು ನೂತನ ರಸ್ತೆಯನ್ನು ಸುಮಾರು 10ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಪುರೋಹಿತ ಶಂಕರ ಭಟ್ ರವರು ಧಾರ್ಮಿಕ ಪೂಜೆ,ಪ್ರಾರ್ಥನೆ ನೆರವೇರಿಸಿದರು. ಈ ಕಾಮಗಾರಿಗೆ ಅನುದಾನ ಒದಗಿಸಿದ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಯ ಸದಸ್ಯ ಹರೀಶ್ ಇಂಜಾಡಿ, ಸವಿತಾ ಭಟ್,ಸೌಮ್ಯ ಭರತ್, ಮಾಜಿ ಸದಸ್ಯ ಕೃಷ್ಣಮೂರ್ತಿ ಭಟ್,ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಪವನ್, ರವೀಂದ್ರ ರುದ್ರಪಾದ,ಕಿಶೋರ್ ಅರಂಪಾಡಿ ಗಣೇಶ,ಮೊದಲಾದವರು ಸೇರಿದಂತೆ ಸ್ಥಳೀಯ ಕೊರಗ ತನಿಯ ದೈವಸ್ಥಾನದ ಪ್ರಮುಖರಾದ ದಿನೇಶ್, ಲೋಕೇಶ್,ಲಕ್ಷ್ಮೀಶ, ಅಣ್ಣು, ಸುಬ್ರಹ್ಮಣ್ಯ ಮಾನಾಡು, ತಾರಾನಾಥ,ಪ್ರಶಾಂತಿ, ಯಶ್ವಥ್, ರವಿ ಅಗರಿಕಜೆ,, ಸುಬ್ರಹ್ಮಣ್ಯ ಶಬರಾಯ, ಗುತ್ತಿಗೆದಾರರಾದ ಅಮೃತ ಕನ್ಸ್ಟ್ರಕ್ಷನ್ ಅವಿನಾಶ್ ಪಳ್ಳಿಗದ್ದೆ ಮೊದಲಾದವರು ಉಪಸ್ಥಿತರಿದ್ದರು.