ಕುಕ್ಕೆ ಸುಬ್ರಹ್ಮಣ್ಯ ಮಾನಾಡು ರಸ್ತೆಗೆ ಗುದ್ದಲಿ ಪೂಜೆ.

ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿವ್ಯಾಪ್ತಿಗೆ ಒಳಪಡುವ ,ಕೊರಗ ತನಿಯ ದೈವಸ್ಥಾನದ ಬಳಿ ಸ್ಥಳಾಂತರಿಸಲಾದ ದೇವರಗದ್ದೆ -ಮಾನಾಡು ನೂತನ ರಸ್ತೆಯನ್ನು ಸುಮಾರು 10ಲಕ್ಷ ವೆಚ್ಚದಲ್ಲಿ ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು. ಪುರೋಹಿತ ಶಂಕರ ಭಟ್ ರವರು ಧಾರ್ಮಿಕ ಪೂಜೆ,ಪ್ರಾರ್ಥನೆ ನೆರವೇರಿಸಿದರು.
ಈ ಕಾಮಗಾರಿಗೆ ಅನುದಾನ ಒದಗಿಸಿದ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಯ ಸದಸ್ಯ ಹರೀಶ್ ಇಂಜಾಡಿ,
ಸವಿತಾ ಭಟ್,ಸೌಮ್ಯ ಭರತ್, ಮಾಜಿ ಸದಸ್ಯ ಕೃಷ್ಣಮೂರ್ತಿ ಭಟ್,ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯ ಪವನ್, ರವೀಂದ್ರ ರುದ್ರಪಾದ,ಕಿಶೋರ್ ಅರಂಪಾಡಿ ಗಣೇಶ,ಮೊದಲಾದವರು ಸೇರಿದಂತೆ ಸ್ಥಳೀಯ ಕೊರಗ ತನಿಯ ದೈವಸ್ಥಾನದ ಪ್ರಮುಖರಾದ ದಿನೇಶ್, ಲೋಕೇಶ್,ಲಕ್ಷ್ಮೀಶ, ಅಣ್ಣು, ಸುಬ್ರಹ್ಮಣ್ಯ ಮಾನಾಡು, ತಾರಾನಾಥ,ಪ್ರಶಾಂತಿ, ಯಶ್ವಥ್, ರವಿ ಅಗರಿಕಜೆ,, ಸುಬ್ರಹ್ಮಣ್ಯ ಶಬರಾಯ, ಗುತ್ತಿಗೆದಾರರಾದ ಅಮೃತ ಕನ್ಸ್ಟ್ರಕ್ಷನ್ ಅವಿನಾಶ್ ಪಳ್ಳಿಗದ್ದೆ ಮೊದಲಾದವರು ಉಪಸ್ಥಿತರಿದ್ದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!