ಕೆ.ಎಸ್.ಎಸ್ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರಕ್ಕೆ ಭವ್ಯ ಸಮಾರೋಪ.

ಸುಳ್ಯ ತಾಲ್ಲೂಕಿನ ಗುತ್ತಿಗಾರು ಪದವಿ ಪೂರ್ವ ಕಾಲೇಜಿನಲ್ಲಿ ಏಪ್ರಿಲ್ 4ರಿಂದ 10ರವರೆಗೆ ನಡೆದ ಕೆ.ಎಸ್.ಎಸ್. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವಾರ್ಷಿಕ ವಿಶೇಷ ಶಿಬಿರವು ಶನಿವಾರ ಭವ್ಯವಾಗಿ ಸಮಾರೋಪಗೊಂಡಿತು.

ಈ ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹಯೋಗದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ ವಹಿಸಿದರು. ಸುಳ್ಯ ಸುದ್ದಿ ಚಾನೆಲ್‌ನ ಮುಖ್ಯಸ್ಥ ಶ್ರೀ ದುರ್ಗಾ ಕುಮಾರ್ ನಾಯರ್ ಕೆರೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸ್ಫೂರ್ತಿದಾಯಕ ಭಾಷಣ ನೀಡಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಯೋಜನಾ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಗುತ್ತಿಗಾರು ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಕುಶಾಲಪ್ಪ ತುಂಬತ್ತಾಜೆ, ಪೂರ್ವಾಧಿಕಾರಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ವೇಣೂರು ಪಿಪಿಯು ಕಾಲೇಜಿನ ಸಹಶಿಕ್ಷಕ ಹೆರಾಲ್ಡ್ ನೆಲ್ಸನ್ ಕ್ಯಾಸ್ಟೋಲಿನೋ, ಗುತ್ತಿಗಾರು ಪಿಪಿಯು ಕಾಲೇಜಿನ ಪ್ರಾಂಶುಪಾಲ ಚೊಕ್ಕದ ಚೆನ್ನಮ್ಮ ಹಾಗೂ ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ ನಾಯರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಐಕ್ಯೂಎಸಿ ಸಂಯೋಜಕಿ ಲತಾ ಬಿ.ಟಿ, ಶಿಬಿರ ಸಂಯೋಜಕ ಸುಧೀರ್ ಅಮೈ, ಎಸ್‌ಡಿಎಂಸಿ ಸದಸ್ಯ ಕೇಶವ ಕಾಂತಿಲ, ಎನ್‌ಎಸ್‌ಎಸ್ ಘಟಕದ ಯೋಜನಾಧಿಕಾರಿ ಸುಮಿತ್ರ, ಹಾಗೂ ಘಟಕದ ನಾಯಕರು ನಿಶಾ ಗೌರಿ ಎಂ., ಧನ್ಯ ಬಿ.ಎಸ್., ಪ್ರದೀಪ್ ಸಿ.ವಿ., ಜೀವನ್ ಎ. ಉಪಸ್ಥಿತಿತರಾಗಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಪೂರ್ಣಿಮಾ ಆತಿಥ್ಯ ಸ್ವಾಗತಿಸಿದರು. ಆರತಿ ಕೆ. ವಂದನಾ ಕಾರ್ಯಕ್ರಮವನ್ನು ನಿರ್ವಹಿಸಿದರು. ನಿರೂಪಣೆಯನ್ನು ಜೀವಿತ್ ನಡೆಸಿದರು.

Post a Comment

Previous Post Next Post