ಬೋಳಂಬಳ್ಳಿ ಕ್ಷೇತ್ರದಲ್ಲಿ ಐತಿಹಾಸಿಕ ಘಟ್ಟ: ಏಕಶಿಲಾ ಬಾಹುಬಲಿ ಮತ್ತು ರಾಮಚಂದ್ರರ ಭವ್ಯ ಪ್ರತಿಮೆ ಪ್ರತಿಷ್ಠಾಪನೆ.

ಕುಂದಾಪುರ: ಬೋಳಂಬಳ್ಳಿ ಶ್ರೀ ಪದ್ಮಾವತಿ ದೇವಿ ಕ್ಷೇತ್ರದಲ್ಲಿ ಏಪ್ರಿಲ್ 6 ರಂದು ಒಂದು ಐತಿಹಾಸಿಕ ಧಾರ್ಮಿಕ ಕ್ಷಣಕ್ಕೆ ಸಾಕ್ಷಿಯಾಯಿತು. ಹುಂಬುಜ ಮಠದ ಪೀಠಾಧಿಪತಿ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಭಟ್ಟಾಚಾರ್ಯ ಮಹಾಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಲ್ಲಿ 27 ಅಡಿ ಎತ್ತರದ ಏಕಶಿಲಾ ಭಗವಾನ್‌ ಶ್ರೀ ಬಾಹುಬಲಿ ಸ್ವಾಮಿಯ ಹಾಗೂ 21 ಅಡಿ ಎತ್ತರದ ಭಗವಾನ್‌ ಶ್ರೀ ರಾಮಚಂದ್ರ ದೇವರ ಪ್ರತಿಷ್ಠೆ ಜರಗಿತು. ಇದು ಉಡುಪಿ ಜಿಲ್ಲೆಯಲ್ಲಿನ ಎರಡನೇ ಬಾಹುಬಲಿ ವಿಗ್ರಹವಾಗಿದೆ.

ಈ ಪುಣ್ಯ ಕಾರ್ಯದಲ್ಲಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್‌ ಜೈನ್‌ ಮತ್ತು ವನಿತಾ ಧರ್ಮರಾಜ್‌ ದಂಪತಿಗಳು ಆಲಂಕಾರಿಕ ಆರತಿ ಬೆಳಗುವ ಮೂಲಕ ಮುನ್ನುಡಿ ಹಾಕಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ, ಡಾ. ಆಕಾಶ್‌ರಾಜ್‌, ಮೂಡುಬಿದಿರೆಯ 18 ಬಸದಿಗಳ ಆಡಳಿತ ಮೊಕ್ತೇಸರ ಆದರ್ಶ್‌ ಎಂ., ಸುಭಾಶ್‌ ಜೈನ್‌ (ಕುಂದಾಪುರ), ನಾಗರಾಜ್‌, ಪದ್ಮಪ್ರಸಾದ್‌ ಜೈನ್‌, ಡಾ. ಅಕ್ಷತಾ ಆದರ್ಶ್‌, ಎಂ.ಎನ್. ವಿಜಯೇಂದ್ರ ಮಳೂರು, ಪಾವನ ರಾಜ್‌, ಪಾರೀಷ್‌ ಮತ್ತು ನೂರಾರು ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

ಈ ಪ್ರತಿಷ್ಠಾಪನೆಯು ಬೋಳಂಬಳ್ಳಿ ಕ್ಷೇತ್ರದ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಇನ್ನಷ್ಟು ಉತ್ತುಂಗಕ್ಕೆ ಎಳೆದಿದ್ದು, ಜೈನ ಧರ್ಮದ ಭಕ್ತರಿಗೆ ಹಾಗೂ ಹಿಂದೂ ಪರಂಪರೆಯ ಅಭಿಮಾನಿಗಳಿಗೆ ಅದ್ಭುತ ಆಧ್ಯಾತ್ಮಿಕ ಅನುಭವವನ್ನು ನೀಡಿದೆ.

Post a Comment

أحدث أقدم