ಸುವರ್ಣೋತ್ಸವದ ಸ್ಫೂರ್ತಿ: ಬಿಳಿನೆಲೆ ಕೈಕಂಬ ಯುವಕ ಮಂಡಲದಿಂದ ಸಂಭ್ರಮದ ಯುವಸೌಧ ಉದ್ಘಾಟನೆ.

ಸುಬ್ರಹ್ಮಣ್ಯ, ಮೇ 24: ಬಿಳಿನೆಲೆ ಕೈಕಂಬ ಯುವಕ ಮಂಡಲವು ತನ್ನ 50ನೇ ವರ್ಷವನ್ನು ಸಂಭ್ರಮದಿಂದ ಆಚರಿಸಲು ಸಜ್ಜಾಗಿದೆ. ಸುವರ್ಣ ಮಹೋತ್ಸವ ಹಾಗೂ ನೂತನ ಕಟ್ಟಡ ಯುವಸೌಧದ ಉದ್ಘಾಟನಾ ಸಮಾರಂಭವು ಮೇ 25, ಭಾನುವಾರ ನಡೆಯಲಿದೆ.

ಬೆಳಿಗ್ಗೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಲೀಲಾವತಿ ದೇವರಾಜ್ ಮುದ್ದಾಜೆ ವೆಂಕಟಪುರ ಅವರು ಯುವಸೌಧವನ್ನು ಉದ್ಘಾಟಿಸಲಿದ್ದಾರೆ.

ಸಂಜೆ ಸುವರ್ಣ ಮಹೋತ್ಸವದ ವಿಶೇಷ ಸಭಾ ಕಾರ್ಯಕ್ರಮ ಜರುಗಲಿದ್ದು, ನಂತರ ಪುಟಾಣಿ ವಿದ್ಯಾರ್ಥಿಗಳ ನೃತ್ಯ, ಹಾಡು ಸೇರಿದಂತೆ ಗ್ರಾಮಸ್ಥರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ರಾತ್ರಿ 10 ಗಂಟೆಯಿಂದ ಕುಶಾಲ್ದ ಗುರಿಕಾರಿ ದಿನೇಶ್ ಗೌಡ ಅವರ ಸಾರಥ್ಯದಲ್ಲಿ, ಜಿಲ್ಲೆಯ ಪ್ರಸಿದ್ಧ ಹಾಸ್ಯ ಕಲಾವಿದರೊಂದಿಗೆ ಯಕ್ಷ ಹಾಸ್ಯ ವೈಭವ ನಡೆಯಲಿದ್ದು, ಗ್ರಾಮಸ್ಥರಿಗೆ ಉತ್ತಮ ಮನರಂಜನೆಯೂ ಸಿಕ್ಕಲಿದೆ.

ಸರ್ವರಿಗೂ ಸಂಘಟಕರ ವತಿಯಿಂದ ಹಾರ್ದಿಕ ಸ್ವಾಗತ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ