ನೆಲ್ಯಾಡಿ-ಕೊಕ್ಕಡ ಮಾರ್ಗ ಬಂದ್: ಬದಲಿ ಮಾರ್ಗ ಮೂಲಕ ಸಂಚಾರಕ್ಕೆ ಸೂಚನೆ.

ನೆಲ್ಯಾಡಿ-ಕೊಕ್ಕಡ ರಸ್ತೆಯ ಪುತ್ಯೆ ಪ್ರದೇಶದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಈ ಮಾರ್ಗವನ್ನು ಇಂದಿನಿಂದ ಬಂದ್ ಮಾಡಲಾಗಿದೆ ಎಂದು ಕೌಕ್ರಾಡಿ ಗ್ರಾಮ ಪಂಚಾಯತ್ ಪ್ರಕಟಣೆಯಲ್ಲಿ ತಿಳಿಸಿದೆ.

ರಸ್ತೆ ಬಂದ್ ಹಿನ್ನೆಲೆ, ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗಗಳ ಮೂಲಕ ಸಾಗಿಸಲು ಸೂಚನೆ ನೀಡಲಾಗಿದೆ. ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ, ಪುತ್ಯೆ ಎಂಬಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಕೊಕ್ಕಡಕ್ಕೆ ಸಂಚರಿಸುವ ವಾಹನಗಳು ಈಗಿನಿಂದ ನೆಲ್ಯಾಡಿ, ಪಡ್ಡಡ್ಕ, ಹಾರ, ಮಾಯಿಲಕೋಟೆ ಮಾರ್ಗವಾಗಿ ಸಂಚರಿಸಬಹುದು.

ಈ ಕುರಿತು ಮಾಹಿತಿ ನೀಡಿದ ಕೌಕ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ್ ಕುಮಾರ್ ಗೌಡ ಮಾಧ್ಯಮಗಳಿಗೆ ಮಾತನಾಡಿ, ಸಾರ್ವಜನಿಕರು ಸಹಕಾರ ನೀಡುವುದರಿಂದ ಕಾಮಗಾರಿ ಗತಿ ಪಡೆಯಲಿದ್ದು, ಭವಿಷ್ಯದಲ್ಲಿ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವ ಉದ್ದೇಶವಿದೆ ಎಂದು ತಿಳಿಸಿದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ