ಬಿಳಿನೆಲೆ ಕೈಕಂಬ ಯುವಕ ಮಂಡಲದ ಸುವರ್ಣ ಮಹೋತ್ಸವ ವಿಜೃಂಭಣೆಯಿಂದ"ಯುವಶಕ್ತಿ ಸಂಘಟಿತ ರಾಗಿ, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಿ" - ಶಾರದಾ ದಿನೇಶ್

ಸುಬ್ರಹ್ಮಣ್ಯ, ಮೇ 27 – ಕಡಬ ತಾಲೂಕು ಬಿಳಿನೆಲೆ ಕೈಕಂಬ ಯುವಕ ಮಂಡಲವು ತನ್ನ 50 ವರ್ಷದ ಸುವರ್ಣ ಮಹೋತ್ಸವವನ್ನು ಜರುಗಿಸಿಕೊಂಡಿತು. ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ ದಿನೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಯುವಕರು ಸಂಘಟಿತರಾಗಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ಬೆಳಗ್ಗೆ ಗಣಪತಿ ಹವನ, ಭಜನೆ ಬಳಿಕ ನೂತನ ಕಟ್ಟಡವನ್ನು ಶ್ರೀಮತಿ ಲೀಲಾವತಿ ದೇವರಾಜ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಿವಪ್ರಸಾದ್ ನಡುತೋಟ ವಹಿಸಿದ್ದರು. ಪ್ರಮುಖ ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ,ಸುಧೀರ್ ಕುಮಾರ್ ಶೆಟ್ಟಿ,
ವೆಂಕಟ ಒಳಲಂಬೆ, ಶಿವಪ್ರಸಾದ್ ಮೈಲೇರಿ, ವಾಡ್ಯಪ್ಪ ಗೌಡ, ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ದಾನ ಧಾರ್ಮಿಕರಲ್ಲಿ ₹20,000, ₹10,000 ಮತ್ತು ₹5,000 ಮೀರಿದ ದಾನಿಗಳನ್ನು ಗೌರವಿಸಲಾಯಿತು. ಪ್ರವೀಣ್ ಕುಮಾರ್ ಪಿಲಿಕಜೆ ಸ್ವಾಗತ, ವಿಜಯಕುಮಾರ್ ನಡುತೋಟ ಪ್ರಸ್ತಾವನಾ, ಹರೀಶ್ ಚೇರು ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮ ನಿರೂಪಣೆಯನ್ನು ಜಯಪ್ರಕಾಶ್ ಎರ್ಮೈಲ್ ಮಾಡಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳ ನೃತ್ಯ, ಯುವಕರ ಡ್ಯಾನ್ಸ್ ಬೀಟ್, ದಿನೇಶ್ ಕೊಡಪದವ್ ಅವರ ನೇತೃತ್ವದಲ್ಲಿ ಯಕ್ಷ. ತೆಲಿಕೆ ಪ್ರದರ್ಶನ ನಡೆಯಿತು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!