ಕಡಬ ಬಸ್ ನಿಲ್ದಾಣ ಸಮಸ್ಯೆ: ತಕ್ಷಣ ಕ್ರಮಕ್ಕೆ ಸೂಚನೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ
ಕಡಬ , ಜುಲೈ 1: ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಕಡಬ ಬಸ್ ನಿಲ್ದಾಣದ ಸಮಸ್ಯೆಯ ಬಗ್ಗೆ ಗಂಭೀರವಾಗಿ ಗಮನಹರಿಸಿ, ತಕ್ಷಣ ಕ್ರಮಕೈಗೊಳ್ಳಬೇಕೆಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸೂಚನೆ ನೀಡಿದರು. ಕಡಬ ತಾಲೂಕು ಬಸ್ ನಿಲ್ದಾಣವು ಸುಬ್ರಹ್ಮಣ್ಯ - ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಮದ್ಯದಲ್ಲಿ, ತಿರುವಿನಲ್ಲಿ ನೆಲೆಗೊಂಡಿದೆ. ಇದರಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಅಪಾರ ತೊಂದರೆ ಉಂಟಾಗುತ್ತಿದ್ದು, ಅಪಾಯದ ಪರಿಸ್ಥಿತಿಗೂ ಕಾರಣವಾಗುತ್ತಿದೆ. ಈ ಸ್ಥಳವು ಪಂಜ ಕಡೆಗೆ ಹೋಗುವ ರಸ್ತೆಯೂ ತಾಗಿಕೊಂಡಿರುವುದರಿಂದ, ಮೂರು ಪ್ರಮುಖ ದಿಕ್ಕುಗಳಿಂದ ವಾಹನಗಳು ಸೇರಿದ ಹೆದ್ದಾರಿ ಸಂಪರ್ಕದ ಮಧ್ಯದಲ್ಲಿ ಬಸ್ ನಿಲ್ದಾಣ ಇರುವುದೇ ಪ್ರಮುಖ ಸಮಸ್ಯೆ ಎಂದು ಸ್ಥಳೀಯರು ವಿವರಿಸಿದರು. ಈ ವಿಷಯವನ್ನು ಮಾಧ್ಯಮದವರು ಪ್ರಸ್ತಾಪಿಸಿದಾಗ, ಸಚಿವರು ತಕ್ಷಣವೇ ಕ್ರಮಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, "ಹೊಸ ಬಸ್ ನಿಲ್ದಾಣಕ್ಕೆ ಭೂಮಿ ಈಗಾಗಲೇ ನಿಗದಿಯಾಗಿದ್ದು, ಆದರೆ ಅದಕ್ಕೆ ಸಂಪರ್ಕ ಹೊಂದುವ ರಸ್ತೆಯಲ್ಲಿ ಖಾಸಗಿ ಕಟ್ಟಡವೊಂದು ಅಡ್ಡಿಯಾಗಿದ್ದು, ಯೋಜನೆ ಮುಂದುವರಿಯಲು ವಿಳಂಬವಾಗಿದೆ" ಎಂದು ಹೇಳಿದರು. ಅವರಿಗೆ ಪ್ರತಿಕ್ರಿಯಿಸಿದ ಸಚಿವ ರಾಮಲಿಂಗಾ ರೆಡ್ಡಿಯವರು, ...