ನೆಲ್ಯಾಡಿ ಧರ್ಮಪಥ ಯುವಕ ಮಂಡಲದಿಂದ ಸ್ವಚ್ಛತಾ ಶ್ರಮದಾನ ಮತ್ತು ವನಮಹೋತ್ಸವ: ಪರಿಸರ ಸಂರಕ್ಷಣೆಗೆ ನಿದರ್ಶನವಾದ ಜಾಗೃತಿ ಕಾರ್ಯಕ್ರಮ.

ನೆಲ್ಯಾಡಿ:
ಧರ್ಮಪಥ ಯುವಕ ಮಂಡಲದ ಸದಸ್ಯರು ಸಾಮಾಜಿಕ ಜವಾಬ್ದಾರಿಯ ಕುರಿತು ಚಿಂತಿಸಿ ಶ್ರದ್ಧೆಯಿಂದ ಶ್ರಮದಾನ ಹಾಗೂ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸ್ಥಳೀಯ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದೊಂದಿಗೆ, ನೆಲ್ಯಾಡಿಯ ರಾಷ್ಟ್ರೀಯ ಹೆದ್ದಾರಿ -75ರ ಪಕ್ಕದಲ್ಲಿ ಪ್ರಕೃತಿ ಅಬಿವೃದ್ಧಿ  ಪಡಿಸುವ ಉದ್ದೇಶದಿಂದ ನೂರಾರು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಪ್ರತಿಜ್ಞೆ ಬಲಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಪಾಲ್ಗೊಂಡ ಯುವಕರು:
ನರೇಂದ್ರ, ತಿಲಕ್ ರಾಜ್, ಸಂಕೇತ್, ಪ್ರೀತಮ್, ಆಧೀಷ್, ಯಶ್ವಿತ್, ಅಧೀಷ್, ಶ್ಯಾಮ್ ಶೌರಿ, ಚೇತನ್ ಅವರು ಶ್ರಮದಾನದ ಮೂಲಕ ತಮ್ಮ ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಿಸಿದರು.
ಅವರೊಂದಿಗೆ ಪುರುಷೋತ್ತಮ ಶೆಟ್ಟಿ ಕೊಲ್ಯೊಟ್ಟು, ಸುಧೀರ್ ಕುಮಾರ್, ಉದಯ್ ಕುಮಾರ್, ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಹಕರಿಸಿದರು.

ಈ ಕಾರ್ಯದ ಮೂಲಕ ಮಕ್ಕಳು ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಮುಂದಿನ ಪೀಳಿಗೆಗೆ ಸ್ಪೂರ್ತಿ ನೀಡುವ ಕಾರ್ಯ ಮಾಡಿದ್ದಾರೆ. ಇದೊಂದು ಮಾದರಿ ಕಾರ್ಯವಾಗಿ ಗುರುತಿಸಲ್ಪಡುತ್ತಿದ್ದು, ಇಂತಹ ಚಟುವಟಿಕೆಗಳು ಹೆಚ್ಚು ನಡೆಯಲಿ ಎಂಬ ಆಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!