ಭಾರಿ ಗಾಳಿ ಮಳೆಗೆ ಮನೆ ಹಾನಿ: ಸಿರಿಬಾಗಿಲು ಗ್ರಾಮದಲ್ಲಿ ಅಡಿಕೆ ಮರ ಬಿದ್ದು ಮನೆ ನಷ್ಟ.

ಗುಂಡ್ಯ, ಜುಲೈ 26:ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಅನಿಲ ಸುಮಿತ್ರ ಅವರ ಮನೆಗೆ ನಿನ್ನೆ ಸಂಜೆ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಅಪಾರ ನಷ್ಟ ಸಂಭವಿಸಿದೆ. ಗಾಳಿಗೆ ಅಡಿಕೆ ಮರ ಬಿದ್ದು ಮನೆಯ ಮೇಲ್ಛಾವಣಿಗೆ ಹಾನಿಯಾಗಿದೆ. ಜೊತೆಗೆ ಮನೆಯ ಕೊಟ್ಟಿಗೆಯ ಶೀಟ್‌ಗಳು ಹಾರಿ ಹೋಗಿದ್ದು, ಮನೆಗೆ ಪ್ರಮುಖ ಹಾನಿ ಉಂಟಾಗಿದೆ.

ಸ್ಥಳಕ್ಕೆ ಗ್ರಾಮ ಲೆಕ್ಕಿಗರಾದ ಸಂತೋಷ್ ಅವರು ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಂಬಂಧಿತ ಇಲಾಖೆಗಳಿಗೆ ವರದಿ ಸಲ್ಲಿಸಿ ಪರಿಹಾರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಸ್ಥಳೀಯರ ಸಹಕಾರದಿಂದ ತಾತ್ಕಾಲಿಕವಾಗಿ ಮನೆಯ ದುರಸ್ತಿ ಕಾರ್ಯ ಆರಂಭಿಸಲಾಗಿದೆ. 

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!