ಸೆ.07: ಚಂದ್ರಗ್ರಹಣದ ನಿಮಿತ್ತ ಕುಕ್ಕೆ ದೇವಳದಲ್ಲಿ ದೇವರ ದರುಶನ ಹಾಗೂ ಸೇವೆಗಳಲ್ಲಿ ವ್ಯತ್ಯಯ.

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.
  07 ರಂದು ಆದಿತ್ಯವಾರ ಚಂದ್ರಗ್ರಹಣ ಇರುವುದರಿಂದ ಈ ದಿನ ಶ್ರೀ ದೇವಳದಲ್ಲಿ ದಿನ ನಿತ್ಯದ ಸೇವೆ ಮತ್ತು ದರುಶನ ಹಾಗೂ ಭಕ್ತಾದಿಗಳ ಸೇವಾ ಸಮಯಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.
** ಮದ್ಯಾಹ್ನ 11 ಗಂಟೆಗೆ ಮಹಾಪೂಜೆ**
ಆದಿತ್ಯವಾರ ಶ್ರೀ ದೇವರ ಮಧ್ಯಾಹ್ನದ ಮಹಾಪೂಜೆ ಯು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.ರಾತ್ರಿಯ ಮಹಾಪೂಜೆಯು ಸಂಜೆ ಗಂಟೆ 5 ಕ್ಕೆ ನೆರವೇರಲಿದೆ.
** ರಾತ್ರಿ ಬೋಜನ ಇಲ್ಲ**
ಆದಿತ್ಯವಾರ ರಾತ್ರಿ ಭೋಜನ ಪ್ರಸಾದ ಇರುವುದಿಲ್ಲ.ಅಲ್ಲದೆ ಸಾಯಂಕಾಲದ ಆಶ್ಲೇಷ ಬಲಿ ಸೇವೆ ಇರುವುದಿಲ್ಲ.
**ಸರ್ಪಸಂಸ್ಕಾರ ಆರಂಭ ಇಲ್ಲ:**
ಆದಿತ್ಯವಾರ ಸರ್ಪಸಂಸ್ಕಾರ ಸೇವೆ ಆರಂಭವಾಗುವುದಿಲ್ಲ.ಶನಿವಾರ ಆರಂಭಗೊಂಡ ಸೇವೆಯು ಆದಿತ್ಯವಾರ ಕೊನೆಗೊಳ್ಳುತ್ತದೆ.ಆದರೆ ಆದಿತ್ಯವಾರ ಸೇವಾರಂಭ ಇಲ್ಲ. ಸಾಯಂಕಾಲ ಗಂಟೆ 5.00 ರಿಂದ ಶ್ರೀ ದೇವರ ದರುಶನ ಇರುವುದಿಲ್ಲ. ಸೆ. 08 ರಂದು ಪಂಚಾಮೃತ ಮಹಾಭಿಷೇಕ ಸೇವೆ ಇರುವುದಿಲ್ಲ. ಆದುದರಿಂದ ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ ಪ್ರಕಟಣೆ ತಿಳಿಸಿದೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!