ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ.

ಬೆಳ್ತಂಗಡಿ:ಬೆಳ್ತಂಗಡಿ ಉಜಿರೆಯಲ್ಲಿ 2014ರಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪ್ರಕರಣದ ವಿವರ:
2014ರ ಮಾರ್ಚ್ 1ರಂದು ಉಜಿರೆಯಲ್ಲಿರುವ ವಸತಿಗೃಹದಲ್ಲಿ ನಡೆದ ಕೊಲೆ ಪ್ರಕರಣವನ್ನು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 126/2014, IPC ಸೆಕ್ಷನ್ 302, 201ರಡಿಯಲ್ಲಿ ದಾಖಲಿಸಲಾಗಿತ್ತು. ಆರೋಪಿಯಾಗಿದ್ದ ಚಿಕ್ಕಮಗಳೂರು ಮೂಲದ ಬಾಳಪ್ಪ ಎಂ. ಕಳ್ಳೊಳ್ಳಿ ಎಂಬಾತನನ್ನು ಬಂಧಿಸಿ, ತನಿಖೆ ನಡೆಸಿ, ಸೂಕ್ತ ಸಾಕ್ಷಾಧಾರಗಳನ್ನು ಸಂಗ್ರಹಿಸಿ ಬೆಳ್ತಂಗಡಿ ಪೊಲೀಸ್ ಠಾಣಾ ನಿರೀಕ್ಷಕ ಲಿಂಗಪ್ಪ ಪೂಜಾರಿ ರವರು ದೋಷಾರೋಪಣಾ ಪಟ್ಟಿಯನ್ನು ಮಾನ್ಯ CJ&JMFC ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಹೆಚ್ಚುವರಿಯಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ (SC/ST Act) ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ಹೆಚ್ಚುವರಿ ದೋಷಾರೋಪಣಾ ಪಟ್ಟಿಯನ್ನು ಆಗಿನ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದ ರಾಹುಲ್ ಕುಮಾರ್ ಶಹಪುರ್ (IPS) ರವರು ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ನ್ಯಾಯಾಲಯದ ತೀರ್ಪು:
ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಜಗದೀಶ್ ರವರು 28-08-2025ರಂದು ತೀರ್ಪು ಪ್ರಕಟಿಸಿ, ಆರೋಪಿ ಬಾಳಪ್ಪ ಎಂ. ಕಳ್ಳೊಳ್ಳಿಗೆ

IPC ಸೆಕ್ಷನ್ 302 ರಡಿಯಲ್ಲಿ: ಜೀವಾವಧಿ ಶಿಕ್ಷೆ + ರೂ.15,000 ದಂಡ (ಪಾವತಿಸದಿದ್ದರೆ 6 ತಿಂಗಳು ಹೆಚ್ಚುವರಿ ಜೈಲು)

IPC ಸೆಕ್ಷನ್ 201 ರಡಿಯಲ್ಲಿ: 2 ವರ್ಷಗಳ ಸರಳ ಜೈಲು + ರೂ.5,000 ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು)


ವಿಧಿಸಲು ಆದೇಶಿಸಿದ್ದಾರೆ.

ಸರ್ಕಾರಿ ವಾದ ಮಂಡನೆ:
ಸರ್ಕಾರಿ ಅಭಿಯೋಜಕರಾಗಿ ಜ್ಯೋತಿ ಪಿ. ನಾಯಕ್ ವಾದ ಮಂಡಿಸಿದ್ದು, ಪ್ರಕರಣದ ತನಿಖಾ ಸಹಾಯಕರಾಗಿ ಎಎಸ್‌ಐ ಕಲೈಮಾರ್ ಹಾಗೂ ನ್ಯಾಯಾಲಯ ಸಿಬ್ಬಂದಿಯಾಗಿ ಮಲ್ಲಿಕಾರ್ಜುನ್ (PC2293) ಕರ್ತವ್ಯ ನಿರ್ವಹಿಸಿದ್ದಾರೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!