ಬಂಟ್ವಾಳ: ಜಾನುವಾರು ಕಳವು ಪ್ರಕರಣದಲ್ಲಿ ಮೂವರು ಆರೋಪಿಗಳ ಬಂಧನ.


ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿ ಆಗಸ್ಟ್ 14, 2025 ರಂದು ನಡೆದ ಜಾನುವಾರು ಕಳವು ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳವುಗೀಡಾದ ಜಾನುವಾರುಗಳ ಅಂಗಾಂಗಗಳು ಮರುದಿನ ಆಗಸ್ಟ್ 15 ರಂದು ಸಮೀಪದಲ್ಲೇ ಪತ್ತೆಯಾಗಿದ್ದವು.

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ:125/2025 ದಾಖಲಾಗಿ, ಕಲಂ 303(2) BNS, ಕಲಂ 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ–2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಗಳಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿತ್ತು.

ಬಂಧಿತರ ವಿವರಗಳು:


1. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34)


2. ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48)


3. ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18)

ಪೊಲೀಸರು ಸೆಪ್ಟೆಂಬರ್ 5, 2025 ರಂದು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

🔎 ವಿಚಾರಣೆಯ ವೇಳೆ, ಇದೇ ಆರೋಪಿಗಳು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ರ:76/2025 ಪ್ರಕರಣದಲ್ಲೂ ಭಾಗಿಯಾಗಿರುವುದು ಪತ್ತೆಯಾಗಿದೆ. ಆ ಪ್ರಕರಣವು ಭಾರತೀಯ ನ್ಯಾಯ ಸಂಹಿತೆ 2023 (Sec: 331(4), 305) ಹಾಗೂ ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ–2020 (Sec: 4,5) ಅಡಿಯಲ್ಲಿ ದಾಖಲಾಗಿತ್ತು.

👉 ಪ್ರಕರಣದ ತನಿಖೆ ಮುಂದುವರಿಯುತ್ತಿದೆ.

Post a Comment

أحدث أقدم