ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವಾರ್ಷಿಕ ಚಂಪಾಷಷ್ಟಿ ಜಾತ್ರಾಮಹೋತ್ಸವದ ಪ್ರಮುಖ ಆಕರ್ಷಣೆಯಾದ ಬ್ರಹ್ಮರಥೋತ್ಸವ ಈ ಬಾರಿ ನವೆಂಬರ್ 26, ಮಂಗಳವಾರ, ಪ್ರಾತಃ 7.29ರ ವೃಶ್ಚಿಕ ಲಗ್ನ ಸುಮುಹೂರ್ತದಲ್ಲಿ ಜರುಗಲಿರುವುದು.
ಈ ಕುರಿತು ಮಾಹಿತಿ ಹಂಚಿಕೊಂಡ ಆಡಳಿತ ಮಂಡಳಿ ಅಧ್ಯಕ್ಷ ಹರೀಶ್ ಇಂಜಾಡಿ,
ಜಾತ್ರಾ ಅವಧಿಯಲ್ಲಿ ಸಾವಿರಾರು ಭಕ್ತರು ದೇಶದ ವಿವಿಧ ಭಾಗಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ದೇವಸ್ಥಾನ ಆಡಳಿತವು ಎಲ್ಲಾ ವ್ಯವಸ್ಥೆಗಳನ್ನೂ ಸಿದ್ಧಪಡಿಸಿದೆ ಎಂದು ಹೇಳಿದ್ದಾರೆ.
ಬ್ರಹ್ಮರಥಸವಾರಿ ಸುರಕ್ಷಿತವಾಗಿ ನಡೆಯುವಂತೆ ವಿಶೇಷ ಭದ್ರತಾ ಕ್ರಮಗಳು ಕೈಗೊಳ್ಳಲಾಗಿದೆ.
ದೇವಸ್ಥಾನದ ಒಳಾಂಗಣ ಹಾಗೂ ಹೊರಾಂಗಣಗಳಲ್ಲಿ ಅಗತ್ಯ ವೈದ್ಯಕೀಯ, ಕುಡಿಯುವ ನೀರು, ನಿಯಂತ್ರಿತ ಪ್ರವೇಶ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.
ಭಕ್ತರ ಸುಗಮ ದರ್ಶನ ಹಾಗೂ ರಥ ಎಳೆಯುವ ಮಾರ್ಗದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಪೊಲೀಸರೊಂದಿಗೆ ಸಮನ್ವಯ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಾತಃಕಾಲ ಮಂಗಳ ವಾದ್ಯ, ಧಾರ್ಮಿಕ ವಿಧಿ–ವಿಧಾನಗಳೊಂದಿಗೆ ರಥೋತ್ಸವ ಪ್ರಾರಂಭವಾಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಜಾತ್ರಾಮಹೋತ್ಸವದ ಅಂಗವಾಗಿ ವಿಶೇಷ ಅನ್ನಸಂತರ್ಪಣೆ, ನೈವೇದ್ಯ ಪೂಜೆಗಳು ನಡೆಯಲಿದ್ದು, ದೇಗುಲದಲ್ಲಿ ಧಾರ್ಮಿಕ ವಾತಾವರಣ ಮನೆ ಮಾಡಿದೆ.
Post a Comment