ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಹಾಯಧನ.

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿರುವ ಶ್ರೀ ಶಶಿಕುಮಾರ್ ರೈ ಬಾಲ್ಯೊಟ್ಟು ನವಂಬರ್ 24ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಭೇಟಿ ನೀಡಿ ಸಂಘದಲ್ಲಿ ಅಳವಡಿಸಿರುವ ನೂತನ ಲಿಫ್ಟ್ ಹಾಗೂ ಇತರ ಕಾಮಗಾರಿಗಳಿಗೆ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾದ 5 ಲಕ್ಷ ಮೊತ್ತದ ಸಹಾಯಧನದ ಚೆಕ್ಕನ್ನು ಸಂಘದ ಉಪಾಧ್ಯಕ್ಷ ಶ್ರೀ ರವಿಚಂದ್ರ ಹೊಸವಕ್ಲು ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಶಿಕುಮಾರ್ ರೈ ಅವರು ಸಂಘವು ಹೊಸತನದೊಂದಿಗೆ ಸದಸ್ಯರಿಗೆ ಸೇವೆಯನ್ನು ನೀಡುತ್ತಿರುವುದು ಮತ್ತು ಹೆಚ್ಚಿನ ವ್ಯವಹಾರವಿದ್ದರೂ ಶೇಕಡ 100 ಸಾಲ ವಸೂಲಾತಿ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ.ರೈ.ಕೆ.ಯಂ ವ್ಯವಸ್ಥಾಪಕ ಮಹೇಶ್ ಎಂ.ಟಿ ಸಿಬ್ಬಂದಿಗಳಾದ ಸಂದೀಪ್ ಶೆಟ್ಟಿ , ಧನುಷ್. ಶ್ರೀಮತಿ ಪ್ರಜ್ಞ ಮಾರ್ಲ, ವನಿತ ಶೆಟ್ಟಿ , ಪ್ರಮೋದ್ ರವರುಗಳು ಉಪಸ್ಥಿತರಿದ್ದರು.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!