ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿಶ್ರಾಂತ ಧರ್ಮಾಧ್ಯಕ್ಷ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿಗೆ ಭಕ್ತಿ ಪೂರ್ವಕ ನುಡಿ ನಮನ
ನೆಲ್ಯಾಡಿ :ನೆಲ್ಯಾಡಿಯ ಪವಿತ್ರ ಸಂತ ಅಲ್ಫೋನ್ಸ ಕ್ಷೇತ್ರ ದಲ್ಲಿ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಇಪ್ಪತಾ ರು ವರ್ಗಳ ಸುದೀರ್ಘ ಸೇವೆ ಯ ನಂತರ ನಿವೃತ್ತರಾದ ಪರಮ ಪೂಜ್ಯ ಅತಿವಂದನಿಯ ಮಾರ್ ಲಾರೆನ್ಸ್ ಮುಕ್ಕುಯಿ ಅವರಿಗೆ. ಶನಿವಾರ ನಡೆದ ಕಾರ್ಯಕ್ರಮದಲ್ಲಿ ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಸರ್ವ ಸದಸ್ಯರು ಹಾಗೂ ನಾಡಿನ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಸಮರ್ಪಸಿ ವಿಶ್ರಾಂತ ಜೀವನಕ್ಕೆ ಶುಭವನ್ನು ಹಾರೈಸಲಾಯಿತು. ಕರಾವಳಿಯಲ್ಲಿ ಸೌಹಾರ್ದತೆ, ಶಾಂತಿ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಲು ಶ್ರೀ ಗಳು ನೀಡಿದ ಸೇವೆ ಯನ್ನು ಗಣ್ಯರು ಸ್ಮರಿಸಿದರು.ನೂತನ ಧರ್ಮಾದ್ಯಕ್ಷ ರಾದ ಅತಿ ವಂದನಿಯ ಪರಮ ಪೂಜ್ಯ ಮಾರ್ ಜೇಮ್ಸ್ ಪಟ್ಟೆರಿಲ್ ಚರ್ಚ್ ನ ಧರ್ಮ ಗುರುಗಳಾದ ವಂದನಿಯ. ಫಾದರ್. ಶಾಜಿ ಮಾತ್ಯು, ಫಾ. ಅಲೆಕ್ಸ್, ರೇಜಿಯನಲ್ ಸುಪಿರಿಯರ್ ಸಿಸ್ಟೆರ್ ಲಿಸ್ ಮಾತ್ಯು ಎಸ್ ಎಚ್ ಟ್ರಸ್ಟಿಗಳಾದ ಜೋನ್ಸನ್ ಪುಳಿಕ್ಕಲ್, ರಾಜೇಶ್ ತೆಕ್ಕಿನಾಟ್ಟು,ರೆಜಿ ಕೊಳಂಗರಾತ್, ಜೋಯ್ ಪುತ್ತೆನ್ಪರಂಭಿಲ್, ಸಂಯೋಜಕರಾಗಿ ಶ್ರೀ ಜೋರ್ಜ್ ಕುಟ್ಟಿ ಆಯಾಮ್ ಕುಡಿ ಮೊದಲಾದವರು ನೇತೃತ್ವವಹಿಸಿದ್ದರು.
ವಿವಿದ ಸಂಘಟನೆಗಳಪದಾಧಿಕಾರಿಗಳು ಗೌರವ ಕಾಣಿಕೆಯನ್ನು ಸಮರ್ಪಸಿದರರು
Comments
Post a Comment