*ನೆಲ್ಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ-- ಸಹಕಾರಿ ಸಪ್ತಾಹದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ*

ನವಂಬರ್ 14ರಂದು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೇಂದ್ರಮತ್ತು ಶಾಖೆಗಳಲ್ಲಿ ಸಹಕಾರಿ ಸಪ್ತಾಹದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಲಾಯಿತು ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣವನ್ನು ಸಂಘದ ನಿರ್ದೇಶಕರಾದ ಜಯಂತ ಬಂಟ್ರಿಯಾಲ್, ಸರ್ವೋತ್ತಮ ಗೌಡ, ಉಷಾ ಅಂಚನ್, ಭಾಸ್ಕರ್ ರೈ ನೆರವೇರಿಸಿದರು.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಯಾಕರ ರೈ ಸ್ವಾಗತಿಸಿ, ಮ್ಯಾನೇಜರ್ ಮಹೇಶ್ ಎಂ. ಟಿ ವಂದಿಸಿದರು, ಕ್ಯಾಂಪ್ಕೊ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು, ಸಂಘದ ಗೊಳಿತೊಟ್ಟು ಶಾಖೆಯಲ್ಲಿ ಸಂಘದ ನಿರ್ದೇಶಕರಾದ ಬಾಬು ನಾಯ್ಕ್ ಧ್ವಜಾರೋಹಣವನ್ನು ನೆರವೇರಿಸಿದರು ಕಾರ್ಯಕ್ರಮಕ್ಕೆ ಸಂಘದ ಮ್ಯಾನೇಜರ್ ರತ್ನಾಕರ ಬಂಟ್ರಿಯಾಲ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು, ಶಿರಾಡಿ ಶಾಖೆಯಲ್ಲಿ ಧ್ವಜಾರೋಹಣ ಸಂದರ್ಭದಲ್ಲಿ ಸಂಘದ ಸದಸ್ಯರಾದ ದಿನಕರ್, ಸುರೇಂದ್ರ, ಮೆನೇಜರ್ ರಮೇಶ್ ನಾಯ್ಕ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Post a Comment

Previous Post Next Post