ಐನೆಕಿದು ಗ್ರಾಮದಲ್ಲಿ ಆನೆ ದಾಳಿ – ಅಪಾರ ಕೃಷಿ ಹಾನಿ, ರೈತರು ಆತಂಕದಲ್ಲಿ!

ಸುಬ್ರಹ್ಮಣ್ಯ: ಐನೆಕಿದು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಕೃಷಿಗೆ ಭಾರೀ ಹಾನಿಯಾದ ಘಟನೆ ಬೆಳಕಿಗೆ ಬಂದಿದೆ. ಡಿಸೆಂಬರ್ 19ರಂದು ಸುರೇಶ್ ಕೂಜುಗೋಡು ಅವರ ತೋಟಕ್ಕೆ ಕಾಡಾನೆ ನುಗ್ಗಿ ಅಡಿಕೆ ಮತ್ತು ತೆಂಗಿನ ಗಿಡಗಳನ್ನು ಧ್ವಂಸ ಮಾಡಿರುವುದು ತಿಳಿದು ಬಂದಿದೆ. ಇದೇ ರೀತಿಯಾಗಿ ಡಿಸೆಂಬರ್ 18ರಂದು ಜಯಪ್ರಕಾಶ್ ಕೂಜುಗೋಡು ಅವರ ತೋಟದಲ್ಲಿಯೂ ಆನೆ ದಾಳಿ ನಡೆದಿದ್ದು, ಅಡಿಕೆ ಮತ್ತು ತೆಂಗಿನ ಗಿಡಗಳು ಹಾನಿಗೊಳಗಾಗಿ ಸಾವಿರಾರು ರೂಪಾಯಿ ನಷ್ಟ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಹಳದಿ ರೋಗ, ಬೆಂಕಿ ರೋಗ, ಕೊಳೆ ರೋಗದಂತಹ ಕೀಟ–ರೋಗಗಳಿಂದಲೇ ಬೆಳೆ ಹಾನಿಗೊಳಗಾಗಿದ್ದ ರೈತರು, ಇದೀಗ ಕಾಡುಪ್ರಾಣಿ ದಾಳಿಯಿಂದಲೂ ತತ್ತರಿಸಿ ಹೋಗಿದ್ದಾರೆ. ನಿರಂತರ ನಷ್ಟದಿಂದ ಜೀವನ ನಿರ್ವಹಣೆಯ ಬಗ್ಗೆ ಆತಂಕ ವ್ಯಕ್ತವಾಗಿದೆ.
ಗ್ರಾಮಸ್ಥರು ಮತ್ತು ರೈತರು ಸಂಬಂಧಿತ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಆನೆ ಚಲಾವಣೆ ಮತ್ತು ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ತಾಲೂಕು ಮಟ್ಟದಲ್ಲಿ ದೂರು ಸಲ್ಲಿಸುವ ಮತ್ತು ಪರಿಹಾರ ಪ್ರಕ್ರಿಯೆ ಆರಂಭಿಸುವ ಭರವಸೆ ದೊರೆತಿದೆ ಎನ್ನಲಾಗಿದೆ.

Comments

Popular posts from this blog

ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯಲ್ಲಿ ಭಕ್ತನ ಮೇಲೆ ಸೌಟಿನಿಂದ ಹಲ್ಲೆ – ವೈರಲ್ ವಿಡಿಯೋ, ದೇವಸ್ಥಾನ ಮೆನೇಜರ್ ಮೌನಕ್ಕೆ ಸಾರ್ವಜನಿಕ ಆಕ್ರೋಶ!

ಕುಕ್ಕೆ ಸುಬ್ರಹ್ಮಣ್ಯ: ಸಾರಿಗೆ ವ್ಯವಸ್ಥೆಯಲ್ಲಿ ಖಾಸಗಿ ಬಸ್ ಸಂಸ್ಥೆಯ ನೂತನ ಹೆಜ್ಜೆ – ಗ್ರಾಮೀಣ ಭಾಗದ ಅಭಿವೃದ್ಧಿಗೆ ಬಲ.

ರಾಮಕುಂಜದಲ್ಲಿ ಹೀಗೊಂದು ಬೇನರ್ - ಬೇನರ್ ಅಳವಡಿಸಿ ತಾಕತ್ತು ತೋರಿದ ಜನರು!