*ಕೆ.ಎಸ್. ಎಸ್ ಕಾಲೇಜಿನ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮಾ ಕೋರ್ಸಿಗೆ ಉತ್ತಮ ಫಲಿತಾಂಶ*

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ರಾಷ್ಟ್ರೀಯ ಪ್ರಾಕೃತ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಶ್ರವಣಬೆಳಗೊಳ ಜಂಟಿಯಾಗಿ ಪ್ರಾಕೃತ ಪ್ರವೇಶ ಮತ್ತು ಡಿಪ್ಲೋಮ ಕೋರ್ಸ್ ನ್ನು ಇತಿಹಾಸ ವಿಭಾಗದ ಮುಖ್ಯಸ್ಥರು ಡಾ ಪ್ರಸಾದ. ಎನ್ ಹಾಗೂ ಇತಿಹಾಸ ವಿಭಾಗದ ಉಪನ್ಯಾಸಕಿ ನಮಿತಾ ಎಂ ಎ ಅವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷವೂ ನಡೆಸಲಾಗುತ್ತದೆ. ಈ ಕೋರ್ಸಿಗೆ 28 ವಿದ್ಯಾರ್ಥಿಗಳು ದಾಖಲಾಗಿ ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ. ಪ್ರಾಕೃತ ಪ್ರವೇಶ ಪರೀಕ್ಷೆಯಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಾದ ರಶ್ಮಿ ಮೂರನೇ ರ್‍ಯಾಂಕ್ ನೊಂದಿಗೆ ಕಂಚಿನ ಪದಕ, ಚಿಂತನಾ ಮತ್ತು ಅಂಕಿತ ಎಂ. ಐದನೇ ರ್‍ಯಾಂಕ್ , ಹಾಗೂ ಶ್ರೇಯ ಕೆ ಮತ್ತು ಯಕ್ಷಿತ ನಾಲ್ಕನೇ ರ್‍ಯಾಂಕ್ ಪಡೆದು ಒಂದು ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಡಿಪ್ಲೋಮಾ ಪರೀಕ್ಷೆಯಲ್ಲಿ ಚೈತನ್ಯ , ಪೂಜಾ ಕೆ, ಬ್ರಾಹ್ಮರಿ.ಕೆ, ಪ್ರೀತಿ ಯು ಎಸ್ ನಾಲ್ಕನೇ ರ್‍ಯಾಂಕ್ ಪಡೆದಿರುತ್ತಾರೆ ಮತ್ತು 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಉತ್ತೀರ್ಣರಾಗಿರುತ್ತಾರೆ.

Post a Comment

أحدث أقدم