Posts

Showing posts from June, 2026

*ಸದ್ದಿಲ್ಲದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು; ಮಾಧ್ಯಮಗಳ ನಿರೀಕ್ಷೆಗೆ ನಿರಾಸೆ – ಅಭಿವೃದ್ಧಿ ಬಗ್ಗೆ ಸ್ಪಷ್ಟನೆ ನೀಡುವಂತೆ ಒತ್ತಾಯ*

Image
ಕುಕ್ಕೆ ಸುಬ್ರಹ್ಮಣ್ಯ ;ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾದ ಶರತ್ ಐಎಎಸ್ ಅವರು ಜೂನ್ 28ರ ರಾತ್ರಿ ಸದ್ದಿಲ್ಲದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ಆದಿಶೇಷ ವಸತಿಗೃಹದಲ್ಲಿ ವಾಸ್ತವ್ಯ ಹೂಡಿದ ಬಳಿಕ ಜೂನ್ 29ರ ಬೆಳಿಗ್ಗೆ ಸುಮಾರು 7 ಗಂಟೆಗೆ ಶ್ರೀ ದೇವರ ದರ್ಶನ ಪಡೆದು ಯಾವುದೇ ಮಾಧ್ಯಮದವರೊಂದಿಗೆ ಮಾತನಾಡದೆ ಹಾಗೂ ಪತ್ರಿಕಾ ಹೇಳಿಕೆ ನೀಡದೆ ತೆರಳಿರುವ ಮಾಹಿತಿ ಲಭ್ಯವಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿ ಕುರಿತು ಆಯುಕ್ತರು ಮಹತ್ವದ ಘೋಷಣೆ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದ ಮಾಧ್ಯಮ ಪ್ರತಿನಿಧಿಗಳಿಗೆ ಈ ನಡೆ ನಿರಾಸೆ ಉಂಟುಮಾಡಿದೆ. ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರಿಗೆ ಇನ್ನಷ್ಟು ಉತ್ತಮ ಮೂಲಭೂತ ಸೌಲಭ್ಯಗಳು ಕಲ್ಪಿಸುವ ಅಗತ್ಯವಿದೆ ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ವಿಶೇಷವಾಗಿ ಭಕ್ತರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಶೌಚಾಲಯಗಳ ನಿರ್ಮಾಣ, ರಥಬೀದಿಯ ಶೆಡ್‌ನಲ್ಲಿ ರಾತ್ರಿ ತಂಗುವ ಭಕ್ತರಿಗೆ ಸೂಕ್ತ ವಸತಿ ವ್ಯವಸ್ಥೆ, ಮಳೆಗಾಲದಲ್ಲಿ ರಸ್ತೆಯ ಮೇಲೆ ಹರಿಯುವ ನೀರನ್ನು ತಡೆಯಲು ಸಮರ್ಪಕ ಚರಂಡಿ ವ್ಯವಸ್ಥೆ, ಗುಣಮಟ್ಟದ ಮತ್ತು ವಿಶಾಲ ವಾಹನ ನಿಲುಗಡೆ ವ್ಯವಸ್ಥೆ, ಹೆಚ್ಚಿನ ಭದ್ರತಾ ಸಿಬ್ಬಂದಿ ನೇಮಕ ಹಾಗೂ ಭಕ್ತರಿಗೆ ಪೂಜೆ ಮತ್ತು ಸೇವೆಗಳ ಕುರಿತು ಮಾಹಿತಿ ನೀಡುವ ಸಹಾಯ ಕೇಂ...

ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನಡೆಯಿತು.

Image
ಸುಬ್ರಹ್ಮಣ್ಯ , ಜೂನ್ 28: ಶ್ರೀ ಸುಬ್ರಹ್ಮಣ್ಯೇಶ್ವರ ಪ್ರಿ-ಯೂನಿವರ್ಸಿಟಿ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ಶನಿವಾರ (ಜೂನ್ 27) ಕಾಲೇಜಿನ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಂದಾ ಹರೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಚ್ಚ ನ್ಯಾಯಾಲಯದ ಹಿರಿಯ ವಕೀಲರು ಹಾಗೂ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಶ್ರೀ ಪ್ರವೀಣ್ ಕುಮಾರ್ ಕೆ. ಎನ್. ಭಾಗವಹಿಸಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳನ್ನು ಉದ್ಘಾಟಿಸಿದರು. ಅತಿಥಿಯಾಗಿ ಶ್ರೀ ಚಾಕೋ ಫಿಲಿಪ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಪ್ರವೀಣ್ ಕುಮಾರ್ ಕೆ. ಎನ್. ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನಾಯಕತ್ವ, ಶಿಸ್ತು, ಜವಾಬ್ದಾರಿ ಹಾಗೂ ಸಾಮಾಜಿಕ ಸೇವೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಇಂತಹ ಸಂಘಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಉತ್ತಮ ನಾಯಕತ್ವ ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು. ಗೌರವ ಅತಿಥಿಗಳಾಗಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶ್ರೀ ವಿಶ್ವನಾಥ್, ಉಪಾಧ್ಯಕ್ಷೆ ಶ್ರೀಮತಿ ಅಶ್ವಿನಿ, ಸದಸ್ಯೆ ಶ್ರೀಮತಿ ತೀರ್ಥಕುಮಾರಿ, ಮಾಜಿ ಅಧ್ಯಕ್ಷ ಶ್ರೀ ರಾಮಕೃಷ್ಣ ಹೊಳ್ಳಾರು ಹಾಗೂ ಜ್ಞಾನದೀಪ ವಿದ್ಯಾರ್ಥಿ ಸಂಘದ ಸಂಘಟಕ ಶ್ರೀ ಮುರಳಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ...

ಎಸ್‌ಎಸ್‌ಪಿಯುನಲ್ಲಿ 1008 ವಿದ್ಯಾರ್ಥಿಗಳ ಸಾಮೂಹಿಕ ಯೋಗಾಸನ: "ಯೋಗೇನ ಚಿತ್ತಸ್ಯ" ಮೊಳಗಿದ ವಿಶ್ವ ಯೋಗ ದಿನಾಚರಣೆ

Image
ಎಸ್‌ಎಸ್‌ಪಿಯುನಲ್ಲಿ ಏಕಕಾಲದಲ್ಲಿ 1008 ವಿದ್ಯಾರ್ಥಿಗಳಿಂದ ಯೋಗಾಸನ "ಯೋಗೇನ ಚಿತ್ತಸ್ಯ..." ಮೊಳಗಿದ ವಿಶ್ವ ಯೋಗ ದಿನಾಚರಣೆ ಚಿತ್ತ ಚಾಂಚಲ್ಯ ನಿವಾರಣೆಗೆ ಯೋಗವೇ ಅಡಿಗಲ್ಲು: ಪ್ರಾಚಾರ್ಯ ಸೋಮಶೇಖರ ನಾಯಕ್ ಸುಬ್ರಹ್ಮಣ್ಯ, ಜೂನ್ 22: ಚಿತ್ತದ ಚಂಚಲತೆಯನ್ನು ದೂರ ಮಾಡಿ ಏಕಾಗ್ರತೆ, ದೈಹಿಕ ಆರೋಗ್ಯ ಮತ್ತು ಮಾನಸಿಕ ಸದೃಢತೆಯನ್ನು ಬೆಳೆಸುವಲ್ಲಿ ಯೋಗ ಮಹತ್ವದ ಪಾತ್ರ ವಹಿಸುತ್ತದೆ. ಪ್ರಾಚೀನ ಋಷಿಮುನಿಗಳಿಂದ ಸಂಜಾತವಾದ ಯೋಗವು ಸರ್ವರೋಗ ನಿವಾರಕವಾಗಿದ್ದು, ವಿಶ್ವಕ್ಕೆ ಭಾರತ ನೀಡಿರುವ ಅಮೂಲ್ಯ ಕೊಡುಗೆಯಾಗಿದೆ ಎಂದು ಎಸ್‌ಎಸ್‌ಪಿಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ಅಭಿಪ್ರಾಯಪಟ್ಟರು. ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸೋಮವಾರ ಆಯೋಜಿಸಿದ್ದ ಸಾಮೂಹಿಕ ಯೋಗಾಸನ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಯೋಗವು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಶಿಸ್ತು ಬೆಳೆಸುತ್ತದೆ. "ಯೋಗದಿಂದ ರೋಗವಿಲ್ಲ" ಎಂಬ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. 1008 ವಿದ್ಯಾರ್ಥಿಗಳ ಸಾಮೂಹಿಕ ಯೋಗಾಸನ ಕಾಲೇಜಿನ ಮೇಲ್ಬಾಗ ಹಾಗೂ ಕೆಳಭಾಗದ ಕ್ರೀಡಾಂಗಣದಲ್ಲ...

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಹಿನ್ನೆಲೆ ಕುಕ್ಕೆ ಶ್ರೀ ದೇವರಲ್ಲಿ ವಿಶೇಷ ಪೂಜೆ.

Image
ಸುಬ್ರಹ್ಮಣ್ಯ , ಜೂನ್ 3: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರ ಯಶಸ್ವಿ ಆಡಳಿತ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು. ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಹಿರಿಯ ಕಾರ್ಯಕರ್ತರು ಶ್ರೀ ದೇವರ ಸನ್ನಿಧಿಯಲ್ಲಿ ಭಕ್ತಿಪೂರ್ವಕವಾಗಿ ಪ್ರಾರ್ಥನೆ ಸಲ್ಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಯುರಾರೋಗ್ಯ, ಯಶಸ್ಸು ಮತ್ತು ಜನಪರ ಆಡಳಿತ ನಡೆಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬೇಡಿಕೊಂಡರು. ಇದೇ ಸಂದರ್ಭದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ., “ಕರ್ನಾಟಕದ ಜನತೆ ಅಪಾರ ನಿರೀಕ್ಷೆಯೊಂದಿಗೆ ಹೊಸ ನಾಯಕತ್ವವನ್ನು ಸ್ವಾಗತಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ ನೀಡಿ ಜನಪರ ಆಡಳಿತ ನೀಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಯುವಜನರ ಆಶೋತ್ತರಗಳಿಗೆ ಸ್ಪಂದಿಸುವ ಆಡಳಿತವನ್ನು ಅವರು ನೀಡುವರು. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಅಭಿವೃದ್ಧಿಯ ವಾತಾವರಣ ನಿರ್ಮಾಣವಾಗಲಿ ಎಂಬ ಆಶ...