Posts

Showing posts from July, 2026

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಕಲಿ ವಸತಿಗೃಹ ವೆಬ್‌ಸೈಟ್ ಮೂಲಕ ಸೈಬರ್ ವಂಚನೆ ಆರೋಪ: ಭಕ್ತರು ಎಚ್ಚರ ವಹಿಸುವಂತೆ ಮನವಿ

Image
ಸುಬ್ರಹ್ಮಣ್ಯ : ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ಆಗಮಿಸುವ ಭಕ್ತರನ್ನು ಗುರಿಯಾಗಿಸಿಕೊಂಡು ನಕಲಿ ವೆಬ್‌ಸೈಟ್‌ಗಳ ಮೂಲಕ ವಸತಿಗೃಹಗಳ ಕೊಠಡಿ ಬುಕ್ಕಿಂಗ್ ಹೆಸರಿನಲ್ಲಿ ಸೈಬರ್ ವಂಚನೆ ನಡೆಸುತ್ತಿರುವ ಆರೋಪಗಳು ಹೆಚ್ಚಾಗುತ್ತಿದ್ದು, ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿಯೂ ಇಂತಹದ್ದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹವೊಂದರ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಅದರಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರ ಫೋಟೋ ಹಾಗೂ ಸ್ಥಳೀಯ ವಸತಿಗೃಹದ ಮಾಹಿತಿಯನ್ನು ಬಳಸಿಕೊಂಡು ಭಕ್ತರನ್ನು ನಂಬಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಲಭ್ಯವಾದ ದಾಖಲೆಗಳ ಪ್ರಕಾರ, ಎಸ್. ಸುನಿಲ್ ಎಂಬವರು ಅವದೇಶ್ ಕುಮಾರ್ ಎಂಬವರಿಗಾಗಿ ಕೊಠಡಿ ಬುಕ್ಕಿಂಗ್ ಮಾಡುವ ಉದ್ದೇಶದಿಂದ ಜುಲೈ 30ರಂದು ಮಧ್ಯಾಹ್ನ 12.42ಕ್ಕೆ ₹2,100 ಹಾಗೂ ಅದೇ ದಿನ ಮಧ್ಯಾಹ್ನ 12.54ಕ್ಕೆ ₹2,550 ಸೇರಿದಂತೆ ಒಟ್ಟು ₹4,650 ಹಣವನ್ನು ಆನ್‌ಲೈನ್ ಮೂಲಕ ಪಾವತಿಸಿದ್ದಾರೆ ಎನ್ನಲಾಗಿದೆ. ಹಣ ಪಾವತಿಸಿದ ಬಳಿಕ ಕುಕ್ಕೆ ಸುಬ್ರಹ್ಮಣ್ಯ ದೇವರ ಫೋಟೋ ಹೊಂದಿರುವ ‘ಅನಘ ಗೆಸ್ಟ್ ಹೌಸ್, ನಿಯರ್ ಆದಿ ಸುಬ್ರಹ್ಮಣ್ಯ ಟೆಂಪಲ್’ ಎಂಬ ವಿವರಗಳಿರುವ ಬಿಲ್‌ವೊಂದನ್ನು ಕಳುಹಿಸಲಾಗಿದ್ದು, ಅದರಲ್ಲಿ ಆಗಸ್ಟ್ 2, 2026ರಂದು ಚೆಕ್-ಇನ್ ಹಾಗೂ ಆಗಸ್ಟ್ 3ರಂದು ಚೆಕ್-ಔಟ್ ಎಂದು ನಮೂದಿಸಲಾಗಿತ್ತು ಎನ್ನಲಾಗಿದ...

ಕುಕ್ಕೆ ಸುಬ್ರಹ್ಮಣ್ಯ: 22ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿಗೆ ನೂತನ ಅಧ್ಯಕ್ಷರಾಗಿ ರತ್ನಾಕರ ಎಸ್. ಆಯ್ಕೆ

Image
ಕುಕ್ಕೆ ಸುಬ್ರಹ್ಮಣ್ಯ : 22ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರು, ಉಪನ್ಯಾಸಕರು ಹಾಗೂ ವಿಜಯವಾಣಿ ಪತ್ರಿಕೆಯ ಸುಬ್ರಹ್ಮಣ್ಯ ವರದಿಗಾರರಾದ ರತ್ನಾಕರ ಎಸ್. ಅವರು ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರತಿವರ್ಷವೂ ಅದ್ದೂರಿಯಾಗಿ ನಡೆಯುವ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವಕ್ಕೆ ತನ್ನದೇ ಆದ ವಿಶೇಷತೆ ಮತ್ತು ಧಾರ್ಮಿಕ ಮಹತ್ವವಿದೆ. ಭಕ್ತಿಭಾವ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಸ್ಪರ್ಧೆಗಳ ಮೂಲಕ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಬಾರಿಯ ಉತ್ಸವದ ನೇತೃತ್ವವನ್ನು ರತ್ನಾಕರ ಎಸ್. ಅವರು ವಹಿಸಲಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ರತ್ನಾಕರ ಎಸ್. ಅವರು ಪತ್ರಿಕೋದ್ಯಮದಲ್ಲಿಯೂ ಸಕ್ರಿಯರಾಗಿದ್ದು, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಜಯವಾಣಿ ಪತ್ರಿಕೆಯ ಸುಬ್ರಹ್ಮಣ್ಯ ವರದಿಗಾರರಾಗಿರುವ ಅವರು, ಉತ್ತಮ ವಾಗ್ಮಿ ಹಾಗೂ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ರತ್ನಾಕರ ಎಸ್. ಅವರು, “ ಶ್ರೀಕೃಷ್ಣ ಜನ್ಮಾಷ್ಟಮಿ ನಮ್ಮೆಲ್ಲರಿಗೂ ಭಕ್ತಿ, ಧರ್ಮ ಮತ್ತು ಸಂಸ್ಕೃತಿಯ ಸಂದೇಶವನ್...

ಕಾರ್ಕಳದಲ್ಲಿ ರಸ್ತೆ ಅಪಘಾತ: ಪತ್ರಕರ್ತ ಪ್ರಾಣಾಪಾಯದಿಂದ ಪಾರು

Image
ಕಾರ್ಕಳ : ಸರ್ವಜ್ಞ ವೃತ್ತದಿಂದ ನಕ್ರೆ ಕಡೆಗೆ ತೆರಳುವ ರಸ್ತೆಯಲ್ಲಿ ಟಾಟಾ ಎಸಿ ಟೆಂಪೋವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪತ್ರಕರ್ತ ಬಾಲಕೃಷ್ಣ ಭೀಮಗುಳಿ ಅವರು ಪ್ರಾಣಾಪಾಯದಿಂದ ಪಾರಾದ ಘಟನೆ ಗುರುವಾರ ನಡೆದಿದೆ. ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಯೇಟಿವ್ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ಬಿಪಿನ್ ಚಂದ್ರಲಾಲ್ ನಕ್ರೆ ಅವರನ್ನು ಅವರ ನಿವಾಸಕ್ಕೆ ಕಾರಿನಲ್ಲಿ ಬಿಟ್ಟು ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪರಪ್ಪು ಸೇತುವೆ ದಾಟಿ ಸ್ವಲ್ಪ ದೂರ ಸಾಗುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ಕಾರೊಂದನ್ನು ನಿಲ್ಲಿಸಲಾಗಿತ್ತು. ಇದೇ ಸಂದರ್ಭದಲ್ಲಿ ಎದುರು ದಿಕ್ಕಿನಿಂದ ವೇಗವಾಗಿ ಬಂದ ಶ್ರೀದೇವಿ ಫರ್ನಿಚರ್ಸ್‌ಗೆ ಸೇರಿದ ಟಾಟಾ ಎಸಿ ಟೆಂಪೋ ನಿಯಂತ್ರಣ ತಪ್ಪಿ ಬಾಲಕೃಷ್ಣ ಭೀಮಗುಳಿ ಅವರು ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಕಮರಿಗೆ ಜಾರಿದ್ದು, ಕಾರಿನ ಚಾಲಕನ ಬದಿಯ ಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಟಾಟಾ ಎಸಿ ಟೆಂಪೋ ವಾಹನಕ್ಕೂ ಹಾನಿಯಾಗಿದೆ. ಅದೃಷ್ಟವಶಾತ್ ಎರಡೂ ವಾಹನಗಳಲ್ಲಿದ್ದವರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ? ಟಾಟಾ ಎಸಿ ಟೆಂಪೋವನ...

ಲಾಡ್ಜ್ ಕೊಠಡಿಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Image
ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಅಜ್ಜಿಹಿತ್ಲು ಸಮೀಪದ ಲಾಡ್ಜ್ ಒಂದರಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ರಾಮನಗರ ಜಿಲ್ಲೆಯ ಉಚ್ಚಮ್ಮನದೊಡ್ಡಿ ನಿವಾಸಿ ಮಧು ಎಸ್. (30) ಅವರು ಜುಲೈ 8ರಂದು ಅಜ್ಜಿಹಿತ್ಲು ಪ್ರದೇಶದಲ್ಲಿರುವ ಲಾಡ್ಜ್‌ಗೆ ಬಂದು ಬಾಡಿಗೆ ಕೊಠಡಿ ಪಡೆದಿದ್ದರು. ಜುಲೈ 9ರಂದು ಸಂಜೆ ಲಾಡ್ಜ್ ಸಿಬ್ಬಂದಿ ಕೊಠಡಿಯ ಬಾಗಿಲು ತೆರೆಯುವಂತೆ ಹಲವು ಬಾರಿ ಕರೆದರೂ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಸಂದೇಹಗೊಂಡ ಸಿಬ್ಬಂದಿ ಕಿಟಕಿಯ ಮೂಲಕ ಪರಿಶೀಲಿಸಿದಾಗ, ಮಧು ಎಸ್. ಅವರು ಕೊಠಡಿಯೊಳಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಬಳಿಕ ವಿಷಯವನ್ನು ಪೊಲೀಸರಿಗೆ ತಿಳಿಸಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಲಾಡ್ಜ್ ಲೀಜುದಾರ ಜಗದೀಶ್ ಪಡ್ಪು ನೀಡಿದ ದೂರಿನ ಆಧಾರದ ಮೇಲೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 15/2026 ದಾಖಲಿಸಿಕೊಂಡಿದ್ದು, **ಬಿಎನ್‌ಎಸ್‌ಎಸ್ ಕಲಂ 194(3)(4)**ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಡಬ: ಬಿಜೆಪಿಗೆ ಶಾಕ್ – 20 ಕುಟುಂಬಗಳ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ.

Image
ಕಡಬ: ಕಾಂಗ್ರೆಸ್ ಪಕ್ಷದ ತತ್ವ-ಸಿದ್ಧಾಂತ, ಬಡವರ ಪರ ಇರುವ ಕಾಳಜಿ ಹಾಗೂ ಜನಪರ ಯೋಜನೆಗಳಿಂದ ಪ್ರೇರಿತರಾಗಿ ಕಡಬ ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ದೊಡ್ಡಕೊಪ್ಪ ವಾರ್ಡ್‌ನ ಸುಮಾರು 20 ಕುಟುಂಬಗಳ ಬಿಜೆಪಿ ಕಾರ್ಯಕರ್ತರು ಶನಿವಾರ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಅವರ ನೇತೃತ್ವದಲ್ಲಿ ನೂತನ ಸದಸ್ಯರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಸತೀಶ್ ನಾಯ್ಕ್ ಮೇಲಿನಮನೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್, ಪಟ್ಟಣ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು, ಸುಳ್ಯ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಫೈಝಲ್ ಕಡಬ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪಕ್ಷದ ಮುಖಂಡ ಪಿ.ಪಿ. ಎಲ್ಯಾಸ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನೂತನ ಸದಸ್ಯರನ್ನು ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಸ್ವಾಗತಿಸಲಾಯಿತು.

*ಜು.9 ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾ ದಿನಾಚರಣೆ*

Image
ಸುಬ್ರಹ್ಮಣ್ಯ;ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನೇತೃತ್ವದಲ್ಲಿ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಜು.9 ರಂದು ಪೂರ್ವಾಹ್ನ ಎಸ್ ಎಸ್ ಪಿ ಯು ಕಾಲೇಜು ಸುಬ್ರಹ್ಮಣ್ಯ ಇದರ ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ನಡೆಯಲಿದೆ. ಕಾರ್ಯಕ್ರಮವನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್ ಬಾಲಕೃಷ್ಣ ಕೊಯಿಲ ವಹಿಸಲಿದ್ದಾರೆ. ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ದಾಯ್ಜಿ ವರ್ಲ್ಡ್ ನ ಮುಖ್ಯಸ್ಥ ವಾಲ್ಟರ್ ನಂದಳಿಕೆ,ಶ್ರೀನಿವಾಸ ನಾಯಕ್ ಇಂದಾಜೆ, ಪುಷ್ಪರಾಜ್ ಬಿ.ಎಸ್,ಸೋಮಶೇಖರ ನಾಯಕ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಾಲ್ಟರ್ ನಂದಳಿಕೆ ಅವರು "ವಿದ್ಯಾರ್ಥಿಗಳ ಭವಿಷ್ಯಕ್ಕೆ ಪತ್ರಿಕೋದ್ಯಮದ ಅಧ್ಯಯನ" ಎಂಬ ವಿಚಾರವಾಗಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಸನ್ಮಾನ, ಬಹುಮಾನ ವಿತರಣೆ ನಡೆಯಲಿದೆ.

ಸುಬ್ರಹ್ಮಣ್ಯ ವಾಲ್ಮೀಕಿ ವಸತಿ ಶಾಲೆಗೆ ಕೊಡುಗೆ ಹಸ್ತಾಂತರ.

Image
ಸುಬ್ರಹ್ಮಣ್ಯ ಜುಲೈ8 ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿ ಇರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್( ರಿ) ಸುಬ್ರಹ್ಮಣ್ಯ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಕುರ್ಚಿ ಹಾಗೂ ಟೀಪಾಯಿಗಳನ್ನು ಕೊಡುಗೆಯಾಗಿ ಮಂಗಳವಾರ ನೀಡಲಾಯಿತು.  ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ ಡಾ. ಎ ಏ ತಿಲಕ್ ಅವರು ಕೊಡುಗೆಗಳನ್ನು ಹಸ್ತಾಂತರಿಸಿ ಮಾತನಾಡುತ್ತಾ" ಸುಬ್ರಹ್ಮಣ್ಯದ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಯು ದಿನದಿಂದ ದಿನಕ್ಕೆ ಅಭಿವೃದ್ದಿ ಹೊಂದುತ್ತಿರುವುದು ತುಂಬಾ ಸಂತೋಷದ ವಿಷಯ. ಹಾಗೂ ಇಲ್ಲಿಗೆ ಬೇಕಾಗುವಂತಹ ಅಗತ್ಯ ಸೌಲಭ್ಯಗಳನ್ನ ಮನಗಂಡು ಈ ಕೊಡುಗೆಯನ್ನು ನಮ್ಮ ಟ್ರಸ್ಟ್ ವತಿಯಿಂದ ನೀಡುತ್ತಿದ್ದೇವೆ,ಹಾಗೂ ಮುಂದಿನ ದಿನಗಳಲ್ಲಿ ನಿರಂತರ ಸಹಕಾರವನ್ನು ಕೂಡ ನೀಡುತ್ತೇವೆ" ಎಂದರು. ವೇದಿಕೆಯಲ್ಲಿದ್ದ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕಿ ಗಾಯತ್ರಿ ತಿಲಕ್,ನಿರ್ದೇಶಕ ದಿನೇಶ್ ಎಂಪಿ,ಸಮಾಜ ಸೇವಕ ಡಾ. ರವಿ ಕಕ್ಕೆ ಪದವು,ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷ ರೋಹಿತ್ ಬಿ.ಬಿ, ಪೂರ್ವ ಅಧ್ಯಕ್ಷ ಗೋಪಾಲ ಎಣ್ಣೆ ಮಜಲ್, ವಾಲ್ಮೀಕಿ ವಸತಿ ಶಾಲಾ ಮೇಲ್ವಿಚಾರಕ ಮುಖ್ಯ ಶಿಕ್ಷಕ ಬಸವರಾಜ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿದರು. ಆರಂಭದಲ್ಲಿ ವಾಲ್ಮೀಕಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನೆರವೇರಿತು ....

ಕುಕ್ಕೆ ಸುಬ್ರಹ್ಮಣ್ಯಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ: ವೈದ್ಯರ ನೇಮಕಕ್ಕೆ ಭರವಸೆ – ಹೋರಾಟ ಮುಂದುವರಿಸಲು ಗ್ರಾಮಸ್ಥರ ನಿರ್ಧಾರ.

Image
ಕುಕ್ಕೆ ಸುಬ್ರಹ್ಮಣ್ಯ, ಜುಲೈ 7: ಜುಲೈ 10ರಂದು ಬೃಹತ್ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ ಅವರು ಸೋಮವಾರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು. ಕುಕ್ಕೆ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ವೈದ್ಯರ ಕೊರತೆ, 24 ಗಂಟೆಗಳ ತುರ್ತು ಆರೋಗ್ಯ ಸೇವೆಯ ಅಭಾವ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮಸ್ಯೆಗಳ ಕುರಿತು ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅಧಿಕಾರಿಗಳ ಮುಂದಿಟ್ಟರು. ಸಭೆಯಲ್ಲಿ ಗ್ರಾಮಸ್ಥರು, ಕುಕ್ಕೆ ಸುಬ್ರಹ್ಮಣ್ಯವು ಲಕ್ಷಾಂತರ ಭಕ್ತರು ಭೇಟಿ ನೀಡುವ ಕ್ಷೇತ್ರವಾಗಿದ್ದು, ಶನಿವಾರ, ಭಾನುವಾರ ಹಾಗೂ ರಾತ್ರಿ ವೇಳೆಯಲ್ಲಿ ವೈದ್ಯರಿಲ್ಲದ ಕಾರಣ ತುರ್ತು ಚಿಕಿತ್ಸೆಗೆ ಸಾರ್ವಜನಿಕರು ಮತ್ತು ಭಕ್ತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ತಕ್ಷಣ ಶಾಶ್ವತ ವೈದ್ಯರನ್ನು ನೇಮಿಸಿ, ಆಸ್ಪತ್ರೆಯಲ್ಲಿ 24 ಗಂಟೆಗಳ ವೈದ್ಯಕೀಯ ಸೇವೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಸರ್ಕಾರದ ನಿಯಮಾನುಸಾರ ವೈದ್ಯರ ನೇಮಕ ಪ್ರಕ್ರಿಯೆಗೆ ಸಮಯ ಬೇಕಾಗುತ್ತದೆ. ಈ ಕುರಿತು ಸರ್ಕಾರ ಹಾಗೂ ಆರೋಗ್ಯ ಸಚಿವರ ಗಮನಕ್ಕೆ ವಿಷಯವನ್ನು ತಂದು ಅಗತ್ಯ ಕ್ರಮಕ್ಕೆ ಪತ್ರ ಬರೆಯಲಾಗುವ...

ಗೋವಿಂದಾ... ಗೋವಿಂದ! ಒಂದೂವರೆ ತಿಂಗಳಲ್ಲೇ ಗೋವಿಂದ ಆದ ದಾರಿದೀಪಗಳು!

Image
ಸುಬ್ರಹ್ಮಣ್ಯ : ಸಾರ್ವಜನಿಕರ ವರ್ಷಗಳ ಬೇಡಿಕೆ ಈಡೇರಿತು ಎಂದು ಕುಲ್ಕುಂದ ಭಾಗದ ಜನ ಖುಷಿಪಟ್ಟರು. ಕುಮಾರಧಾರ ಸೇತುವೆಯಿಂದ ಕುಲ್ಕುಂದವರೆಗೆ ಹೊಸ ದಾರಿದೀಪಗಳು ಅಳವಡಿಕೆಯಾಗುತ್ತಿದ್ದಂತೆ, "ಇನ್ನು ರಾತ್ರಿ ಸಂಚಾರಕ್ಕೂ ಬೆಳಕು ಸಿಕ್ಕಿತು" ಎಂದು ಜನ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ, ಆ ಸಂತೋಷಕ್ಕೆ ಆಯಸ್ಸು ಮಾತ್ರ ಒಂದೂವರೆ ತಿಂಗಳು! ಗುತ್ತಿಗೆದಾರರು ಹೊಸ ತಂತಿ ಎಳೆದು, ವಿದ್ಯುತ್ ಸಂಪರ್ಕ ನೀಡಿ, ಹೆಸರಾಂತ ಕಂಪನಿಯ ದಾರಿದೀಪಗಳನ್ನು ಅಳವಡಿಸಿದ್ದಾರಂತೆ. ನೋಡಲು ಮಿನುಗುತ್ತಿದ್ದವು. ಆದರೆ ಈಗ ನೋಡಿದರೆ, ಹತ್ತರಲ್ಲಿ ಬರೀ ನಾಲ್ಕೇ ದೀಪಗಳು ಉರಿಯುತ್ತಿವೆ. ಉಳಿದವುಗಳೆಲ್ಲ "ಗೋವಿಂದಾ... ಗೋವಿಂದ!" ಎಂದು ಕೈಚೆಲ್ಲಿದಂತಿದೆ. ಗುತ್ತಿಗಾರು ಗುತ್ತಿಗೆ; ಈ ವಿಷಯವನ್ನು ಮೊದಲೇ ಮಾಧ್ಯಮದಲ್ಲಿ ಪ್ರಸ್ತಾಪಿಸಿದಾಗ, ಅಧಿಕಾರಿಗಳ ಗಮನಕ್ಕೆ ತರುವ ಉದ್ದೇಶವೇ ಹೊರತು ಯಾರನ್ನೂ ಟೀಕಿಸುವ ಉದ್ದೇಶ ಇರಲಿಲ್ಲ. ಆದರೆ ಆಗ ಕೆಲವರಿಗೆ ಅದು ಅಷ್ಟಾಗಿ ಇಷ್ಟವಾಗಿರಲಿಲ್ಲ. ಈಗ ದೀಪಗಳೇ ಉತ್ತರ ಕೊಡುತ್ತಿರುವಂತಿದೆ! ಸಾರ್ವಜನಿಕರ ತೆರಿಗೆ ಹಣದಿಂದ ಅಳವಡಿಸಿದ ದಾರಿದೀಪಗಳು ಒಂದೂವರೆ ತಿಂಗಳಲ್ಲೇ ಕೈಕೊಟ್ಟರೆ, ಪ್ರಶ್ನೆಗಳು ಹುಟ್ಟುವುದು ಸಹಜ. ಅಳವಡಿಸಿದ ದೀಪಗಳ ಗುಣಮಟ್ಟ ಹೇಗಿತ್ತು? ಕಾಮಗಾರಿಯ ಮೇಲ್ವಿಚಾರಣೆ ನಡೆದಿತ್ತೇ? ದೋಷ ಕಂಡುಬಂದಿದ್ದರೆ ಗುತ್ತಿಗೆದಾರರಿಂದ ಅ...

ಕುಕ್ಕೆ–ಕಡಬ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ಮಳೆನೀರು ನಿಂತು ರಸ್ತೆ ಹಾನಿ ಭೀತಿ: ತಕ್ಷಣ ಕ್ರಮಕ್ಕೆ ಸಾರ್ವಜನಿಕರ ಆಗ್ರಹ.

Image
ಕುಕ್ಕೆ : ಕುಕ್ಕೆ ಸುಬ್ರಹ್ಮಣ್ಯದಿಂದ ಕಡಬ ಹಾಗೂ ಉಪ್ಪಿನಂಗಡಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಮಳೆಗಾಲದ ವೇಳೆ ಹಲವು ಕಡೆ ಮಳೆನೀರು ರಸ್ತೆಯಲ್ಲೇ ನಿಂತು, ಮಣ್ಣು, ಮರಳು ಹಾಗೂ ಕಲ್ಲುಗಳು ರಸ್ತೆಗೆ ಹರಿದು ಬರುತ್ತಿರುವುದು ವಾಹನ ಸವಾರರು ಮತ್ತು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗುಡ್ಡ ಪ್ರದೇಶಗಳಿಂದ ಹರಿದು ಬರುವ ಮಳೆನೀರು ಹಾಗೂ ಮನೆ, ಅಂಗಡಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಂದ ಹರಿದು ಬರುವ ನೀರು ನೇರವಾಗಿ ರಾಜ್ಯ ಹೆದ್ದಾರಿಗೆ ಸೇರುತ್ತಿದೆ. ರಸ್ತೆ ಬದಿಯ ಚರಂಡಿಗಳು ಸಮರ್ಪಕವಾಗಿಲ್ಲದಿರುವುದು ಹಾಗೂ ಕೆಲವೆಡೆ ಗಿಡಗಂಟೆಗಳು ಬೆಳೆದು ನೀರಿನ ಹರಿವಿಗೆ ಅಡ್ಡಿಯಾಗಿರುವುದರಿಂದ ಮಳೆನೀರು ರಸ್ತೆಯಲ್ಲೇ ನಿಂತುಕೊಳ್ಳುತ್ತಿದೆ. ಇದರೊಂದಿಗೆ ಮಣ್ಣು, ಮರಳು ಹಾಗೂ ಕಲ್ಲುಗಳು ರಸ್ತೆ ಮೇಲೆ ಜಮೆಯಾಗುತ್ತಿವೆ. ಇತ್ತೀಚೆಗೆ ಉತ್ತಮ ಗುಣಮಟ್ಟದಲ್ಲಿ ಡಾಮರೀಕರಣಗೊಂಡಿರುವ ಈ ರಾಜ್ಯ ಹೆದ್ದಾರಿ ದಿನವೂ ಸಾವಿರಾರು ಕಾರು, ಬಸ್, ಲಾರಿ ಹಾಗೂ ಇತರೆ ವಾಹನಗಳ ಸಂಚಾರವನ್ನು ಹೊಂದಿದೆ. ಆದರೆ ರಸ್ತೆಯಲ್ಲಿ ನೀರು ದೀರ್ಘಕಾಲ ನಿಂತರೆ ಡಾಂಬರ್ ಅಡಿಭಾಗದ ಮಣ್ಣು ಸಡಿಲಗೊಂಡು ರಸ್ತೆ ಹಾಳಾಗುವ ಸಾಧ್ಯತೆ ಹೆಚ್ಚಾಗಿದೆ. ಸಮಯಕ್ಕೆ ಮುನ್ನ ಅಗತ್ಯ ನಿರ್ವಹಣೆ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಗುಂಡಿಗಳು ಉಂಟಾಗಿ ಸರ್ಕಾರಕ್ಕೆ ಹೆಚ್ಚಿನ ವೆಚ್ಚ ಹೊರಬೇಕಾಗುವ ಪರಿಸ್ಥಿತಿ ನಿರ್ಮಾಣವಾಗಬಹುದು. ಇನ...

ರಾಮಕುಂಜ: ಆದಿತ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥ, ನಿವೃತ್ತ ಶಿಕ್ಷಕ ಇ. ರಮೇಶ ಉಪಾಧ್ಯಾಯ ನಿಧನ.

Image
ರಾಮಕುಂಜ : ಆದಿತ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರು, ಹಿರಿಯ ಸಮಾಜಸೇವಕರು ಹಾಗೂ ನಿವೃತ್ತ ಶಿಕ್ಷಕರಾದ ರಾಮಕುಂಜ ಗ್ರಾಮದ ಕಲ್ಲೇರಿ ನಿವಾಸಿ ಇ. ರಮೇಶ ಉಪಾಧ್ಯಾಯ (96) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಜುಲೈ 2ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಇ. ರಮೇಶ ಉಪಾಧ್ಯಾಯ ಅವರು ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ರಾಮಕುಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 35 ವರ್ಷಗಳಿಗೂ ಹೆಚ್ಚು ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತು ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ಕೃಷಿ ಚಟುವಟಿಕೆಗಳ ಜೊತೆಗೆ ಮಕ್ಕಳ ಸಹಕಾರದಲ್ಲಿ ವಿವಿಧ ಉದ್ಯಮಗಳನ್ನು ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಉಪ್ಪಿನಂಗಡಿಯಲ್ಲಿ ಹೋಟೆಲ್ ಆದಿತ್ಯ, ಸುಬ್ರಹ್ಮಣ್ಯದಲ್ಲಿ ಆದಿತ್ಯ ನೆಸ್ಟ್, ಧರ್ಮಸ್ಥಳ-ನಿಡ್ಲೆ ಭಾಗದಲ್ಲಿ ಆದಿತ್ಯ ವ್ಯೂ ಸೇರಿದಂತೆ ಹಲವು ಉದ್ದಿಮೆಗಳನ್ನು ಬೆಳೆಸಿದ ಅವರು, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ವಿವಿಧ ಸಾಮಗ್ರಿಗಳ ಪೂರೈಕೆಯಲ್ಲಿಯೂ ಹೆಸರು ಗಳಿಸಿದ್ದರು. ಸಮಾಜಮುಖಿ ಚಿಂತನೆಯ ವ್...