Posts

Showing posts from July, 2026

ರಾಮಕುಂಜ: ಆದಿತ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥ, ನಿವೃತ್ತ ಶಿಕ್ಷಕ ಇ. ರಮೇಶ ಉಪಾಧ್ಯಾಯ ನಿಧನ.

Image
ರಾಮಕುಂಜ : ಆದಿತ್ಯ ಸಮೂಹ ಸಂಸ್ಥೆಗಳ ಮುಖ್ಯಸ್ಥರು, ಹಿರಿಯ ಸಮಾಜಸೇವಕರು ಹಾಗೂ ನಿವೃತ್ತ ಶಿಕ್ಷಕರಾದ ರಾಮಕುಂಜ ಗ್ರಾಮದ ಕಲ್ಲೇರಿ ನಿವಾಸಿ ಇ. ರಮೇಶ ಉಪಾಧ್ಯಾಯ (96) ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಜುಲೈ 2ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಇ. ರಮೇಶ ಉಪಾಧ್ಯಾಯ ಅವರು ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ರಾಮಕುಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 35 ವರ್ಷಗಳಿಗೂ ಹೆಚ್ಚು ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಶಿಸ್ತು ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸಿದ್ದ ಅವರು, ನಿವೃತ್ತಿಯ ನಂತರ ಕೃಷಿ ಚಟುವಟಿಕೆಗಳ ಜೊತೆಗೆ ಮಕ್ಕಳ ಸಹಕಾರದಲ್ಲಿ ವಿವಿಧ ಉದ್ಯಮಗಳನ್ನು ಆರಂಭಿಸಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದರು. ಉಪ್ಪಿನಂಗಡಿಯಲ್ಲಿ ಹೋಟೆಲ್ ಆದಿತ್ಯ, ಸುಬ್ರಹ್ಮಣ್ಯದಲ್ಲಿ ಆದಿತ್ಯ ನೆಸ್ಟ್, ಧರ್ಮಸ್ಥಳ-ನಿಡ್ಲೆ ಭಾಗದಲ್ಲಿ ಆದಿತ್ಯ ವ್ಯೂ ಸೇರಿದಂತೆ ಹಲವು ಉದ್ದಿಮೆಗಳನ್ನು ಬೆಳೆಸಿದ ಅವರು, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ವಿವಿಧ ಸಾಮಗ್ರಿಗಳ ಪೂರೈಕೆಯಲ್ಲಿಯೂ ಹೆಸರು ಗಳಿಸಿದ್ದರು. ಸಮಾಜಮುಖಿ ಚಿಂತನೆಯ ವ್...