Posts

Showing posts from August, 2026

ಕೊಲ್ಲಮೊಗ್ರು: ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ‘ಅನುಬಂಧ’ ಸಮನ್ವಯ ಕಾರ್ಯಾಗಾರ

Image
ಕೊಲ್ಲಮೊಗ್ರು: ಮಕ್ಕಳಿಗೆ ಕೇವಲ ಅಂಕಗಳಿಗಿಂತ ಬದುಕುವ ವಿವೇಕ, ಆತ್ಮವಿಶ್ವಾಸ ಹಾಗೂ ಜೀವನ ಕೌಶಲ್ಯಗಳು ಮುಖ್ಯ. ಪೋಷಕರು ಮಕ್ಕಳನ್ನು ಪರೀಕ್ಷೆಗೆ ಮಾತ್ರವಲ್ಲ, ಜೀವನಕ್ಕೆ ಸಿದ್ಧಪಡಿಸಬೇಕು ಎಂದು ತರಬೇತುದಾರ ಲೋಕೇಶ್ ಪೀರನಮನೆ ಹೇಳಿದರು. ಬಂಗ್ಲೆಗುಡ್ಡೆ ಸ.ಹಿ.ಪ್ರಾ. ಶಾಲಾ ವಠಾರದಲ್ಲಿ ಆಗಸ್ಟ್ 9ರಂದು ಕೊಲ್ಲಮೊಗ್ರು ಕೆ.ವಿ.ಜಿ. ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ‘ಅನುಬಂಧ’ ಎಂಬ ವಿಶೇಷ ಸಮನ್ವಯ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ವಿಷಯ ಮಂಡಿಸಿ ಮಾತನಾಡಿದ ಲೋಕೇಶ್ ಪೀರನಮನೆ, ಇಂದಿನ ಕಾಲಘಟ್ಟದಲ್ಲಿ ಅಂಕಗಳಿಗಿಂತ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಜೀವನ ಕೌಶಲ್ಯ ಅತ್ಯಗತ್ಯ ಎಂದರು. ಮನೆಯಲ್ಲಿ ಪೋಷಕರು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿಕೊಂಡು ಮಕ್ಕಳಿಗೆ ಮಾದರಿಯಾಗಬೇಕು. ಕುಟುಂಬದ ನೈಜ ಪರಿಸ್ಥಿತಿಯ ಅರಿವು ಮಕ್ಕಳಿಗೆ ಮೂಡಿಸಿದಾಗ ಮಾತ್ರ ಅವರು ಜವಾಬ್ದಾರಿಯುತ ಪ್ರಜೆಗಳಾಗಿ ಬೆಳೆಯಲು ಸಾಧ್ಯ ಎಂದು ಅವರು ತಿಳಿಸಿದರು. ಮಕ್ಕಳು ಶಾಲೆಯಲ್ಲಿರುವ 15–20 ವಿದ್ಯಾರ್ಥಿಗಳ ನಡುವೆ ಮಾತ್ರ ಉತ್ತಮ ಸಾಧನೆ ಮಾಡುವುದಷ್ಟೇ ಅಲ್ಲದೆ, ರಾಜ್ಯಮಟ್ಟದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಲು ಸಿದ್ಧರಾಗಬೇಕು ಎಂದು ಸಲಹೆ ನೀಡಿದರು. ಧಾನ್ಯಗಳನ್ನು ಆರಿಸುವ ಉದಾಹರಣೆ ನೀಡಿದ ಅವರು, ಜೀವನದಲ್ಲಿ ನಾವು ಯಾವುದರ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸುತ್ತೇವೆಯೋ ಅದುವೇ ನಮಗ...

400 ಮೀಟರ್ ಓಟದಲ್ಲಿ 21 ವರ್ಷಗಳ ದಾಖಲೆ ಮುರಿದ ಭಾನವಿ ಪಿ.ಎಸ್.

Image
ಸುಳ್ಯ : 400 ಮೀಟರ್ ಓಟದಲ್ಲಿ 21 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದು ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಭಾನವಿ ಪಿ.ಎಸ್. ನೂತನ ದಾಖಲೆ ನಿರ್ಮಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಗಸ್ಟ್ 11 ಮತ್ತು 12ರಂದು ನಡೆದ 18ರ ವಯೋಮಿತಿಯ ರಾಜ್ಯಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯ ಬಾಲಕಿಯರ 400 ಮೀಟರ್ ಓಟದಲ್ಲಿ ಭಾನವಿ ಪ್ರಥಮ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 2005ರಲ್ಲಿ ದಾಖಲಾಗಿದ್ದ 56.20 ಸೆಕೆಂಡ್‌ಗಳ ದಾಖಲೆಯನ್ನು ಭಾನವಿ 56.16 ಸೆಕೆಂಡ್‌ಗಳಲ್ಲಿ 400 ಮೀಟರ್ ಓಟವನ್ನು ಪೂರ್ಣಗೊಳಿಸುವ ಮೂಲಕ ಮುರಿದಿದ್ದಾರೆ. ಕೇವಲ 0.04 ಸೆಕೆಂಡ್‌ಗಳ ಅಂತರದಲ್ಲಿ ನೂತನ ದಾಖಲೆ ನಿರ್ಮಿಸಿರುವುದು ವಿಶೇಷವಾಗಿದೆ. ಭಾನವಿ ಪಿ.ಎಸ್. ಅವರು ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ಫೈಲೂರು ಸುರೇಶ್ ಮತ್ತು ಅನಿತಾ ದಂಪತಿಯ ಪುತ್ರಿಯಾಗಿರುವ ಭಾನವಿ, ತರಬೇತುದಾರ ಶಾಂತರಾಮ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಅಥ್ಲೆಟಿಕ್ಸ್ ತರಬೇತಿ ಪಡೆಯುತ್ತಿದ್ದಾರೆ. 21 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದು ನೂತನ ದಾಖಲೆ ನಿರ್ಮಿಸಿರುವ ಭಾನವಿಯ ಸಾಧನೆಗೆ ಆಳ್ವಾಸ್ ವಿದ್ಯಾಸಂಸ್ಥೆ ಸೇರಿದಂತೆ ಕ್ರೀಡಾಭಿಮಾನಿಗಳಿಂದ ಅಭಿನಂದನೆಗಳು ವ್ಯಕ್ತವಾಗಿವೆ.

ಎಡಕುಮೇರಿ–ಶಿರಿಬಾಗಿಲು ನಡುವೆ ಭೂಕುಸಿತ: ರೈಲು ಸಂಚಾರ ಸ್ಥಗಿತ, ಹಲವು ರೈಲುಗಳ ಮಾರ್ಗ ಬದಲು.

Image
ಸುಬ್ರಹ್ಮಣ್ಯ ರೋಡ್–ಸಕಲೇಶಪುರ ಘಾಟ್ ನಡುವಿನ ಎಡಕುಮೇರಿ ಮತ್ತು ಶಿರಿಬಾಗಿಲು ರೈಲು ನಿಲ್ದಾಣಗಳ ನಡುವೆ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಭಾರೀ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಬಿದ್ದಿದ್ದು, ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ರೈಲ್ವೆ ಹಳಿ ಮೇಲೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ಜೆಸಿಬಿ ಯಂತ್ರಗಳ ಸಹಾಯದಿಂದ ಮಣ್ಣು ತೆರವುಗೊಳಿಸಲಾಗುತ್ತಿದ್ದು, ರೈಲ್ವೆ ಸಿಬ್ಬಂದಿಗಳು ಮಳೆಯನ್ನೂ ಲೆಕ್ಕಿಸದೆ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹಳಿಯನ್ನು ಶೀಘ್ರದಲ್ಲೇ ಸಂಚಾರಕ್ಕೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಸಿಬ್ಬಂದಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಭೂಕುಸಿತದ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಸಂಚರಿಸುವ ಹಲವು ರೈಲುಗಳ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದ್ದು, ಹಲವು ರೈಲು ನಿಲ್ದಾಣಗಳಲ್ಲಿ ನಿಲುಗಡೆಯನ್ನೂ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 16585 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು–ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲು ಬೆಂಗಳೂರು–ಮೈಸೂರು–ಹಾಸನ–ಮಂಗಳೂರು ಸೆಂಟ್ರಲ್ ಮಾರ್ಗದ ಬದಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು–ಈರೋಡ್–ಪಾಲಕ್ಕಾಡ್–ಮಂಗಳೂರು ಜಂಕ್ಷನ್ ಮಾರ್ಗವಾಗಿ ಮುರುಡೇಶ್ವರಕ್...